1:03 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರು ಅಡ್ಡಗಟ್ಟಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ: ಆರೋಪಿ ಶಂಶುದ್ದೀನ್ ಬಂಧನ

17/07/2022, 11:58

ಮಂಗಳೂರು( reporterkaranataka.com): ನಗರದ ಹೊರವಲಯದ ತುಂಬೆ ಬಳಿ ದ.ಕ. ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರಿನ ಗಾಜು ಪುಡಿಮಾಡಿ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಿಂದ ಪುತ್ತೂರಿಗೆ ಜಿಲ್ಲಾ ಪಂಚಾಯಿತಿ ವಾಹನ ವೊಂದರಲ್ಲಿ ಚಾಲಕ ದೇವದಾಸ್ ಅವರು ಅಧಿಕಾರಿಗಳನ್ನು ಕರೆದ್ಯೋತ್ತಿದ್ದರು. ಆ ವೇಳೆ ತುಂಬೆ ಸಮೀಪ ಜಿಲ್ಲಾ ಪಂಚಾಯಿತಿ ಕಾರಿನ ಮುಂಭಾಗದ ವಾಹನ ಬ್ರೇಕ್ ಹಾಕಿದ್ದಾರೆ. ಅ ವೇಳೆ ಜಿಪಂ ವಾಹನ ಚಾಲಕ  ಕೂಡ ಬೇಕ್ ಹಾಕಿದ್ದಾರೆ. ಅದೇ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರ ಶಂಸುದೀನ್ ಕೂಡ ಬೇಕ್ ಹಾಕಿದ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರು. ಇದರಿಂದ ಕೋಪಗೊಂಡ ಆತ ದ್ವಿಚಕ್ರ ವಾಹನವನ್ನು ಕಾರಿಗೆ ಅಡ್ಡ ಗಟ್ಟಿ, ಕಾರಿನ ಮಿರರ್ ಅನ್ನು ಪುಡಿ ಮಾಡಿದ್ದಲ್ಲದೆ, ವಾಹನ ಚಾಲಕನನ್ನು ಹಾಗೂ ಮಹಿಳಾ ಅಧಿಕಾರಿಗಳಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಸಜೀಪ ಕೊಣೆಮಾರ್ ನಿವಾಸಿ ಸಂಶುದೀನ್  ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು