11:05 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು

18/01/2026, 14:05

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಹೊರ ವಲಯದಲ್ಲಿರುವ ಶಿವರಾಜಪುರದಲ್ಲಿ ಸಣ್ಣ ಅಂಗಡಿ ಇಟ್ಟಕೊಂಡು ಮಾರುತಿ ವ್ಯಾನಿನಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವ ಕಾಯಕವನ್ನೂ ನಡೆಸುತ್ತಿದ್ದ ರಮೇಶ್ ಕಾರಿನ ಚಾಲಕನೊಬ್ಬನ ಅತೀ ವೇಗದ ನಿರ್ಲಕ್ಷ್ಯದ ಚಾಲನೆಯಿಂದಾಗಿ ತನ್ನದಲ್ಲದ ತಪ್ಪಿಗೆ ಪ್ರಾಣ ತೆತ್ತಬೇಕಾದ ದುರಂತ ಘಟನೆ ಬಾನುವಾರ ಶಿವರಾಜಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಮೇಶ್ ತನ್ನ ಮಾರುತಿ ವ್ಯಾನಿನಲ್ಲಿ ಊರಿನವರೊಬ್ಬರ ಮದುವೆ ಸಮಾರಂಭದ ಆಹ್ವಾನ ಪತ್ರಿಕೆ ವಿತರಿಸಲು ಇನ್ನೇನು ಕೆಲವೇ ಹೊತ್ತಲ್ಲಿ ಶಿವಮೊಗ್ಗದ ಕಡೆ ತೆರಳಬೇಕಾಗಿತ್ತು. ಈ ನಡುವೆ ಶಿವರಾಜಪುರದ ಆಗುಂಬೆ ರಸ್ತೆಯ ಬದಿಯಲ್ಲಿರುವ ತನ್ನ ಅಂಗಡಿಯ ಎದುರು ಕಾರನ್ನು ನಿಲ್ಲಿಸಿಕೊಂಡು ಕಾರಿನಲ್ಲಿ ಯಾವುದೋ ಅಂಗಡಿಯ ಐಟಮ್ ಗಳನ್ನು ತೆಗೆಯುವುದರಲ್ಲಿ ನಿರತವಾಗಿದ್ದಾಗ ಆಗುಂಬೆ ಕಡೆಯಿಂದ ಬರುತ್ತಿದ್ದ ಕಾರು ಏಕಾಏಕಿ ಎಡದಿಂದ ಸಂಪೂರ್ಣ ರಾಂಗ್ ಸೈಡ್‌ನಲ್ಲಿ ಬಲಕ್ಕೆ ನುಗ್ಗಿ ಬದಿಯಲ್ಲಿ ನಿಂತಿದ್ದ ಮಾರುತಿ ವ್ಯಾನ್ ಮತ್ತು ರಮೇಶನ ಮೇಲೆ ಅಪ್ಪಳಿಸಿ ಒಂದು ಅಮೂಲ್ಯ ಜೀವವನ್ನೇ ಬಲಿ ತೆಗೆದುಕೊಂಡಿತು.
ರಮೇಶ ಶ್ರಮಜೀವಿ. ಅತ್ಯಂತ ಸಾಧು ಸ್ವಭಾವದವರು. ಊರಿನ ಎಲ್ಲರೂ ಅವರನ್ನು ಪ್ರೀತಿಸುತ್ತಿದ್ದರು. ಇವರ ದುರಂತ ಸಾವಿಗೆ ಇವರ ಆತ್ಮೀಯರೆಲ್ಲರೂ ತೀವ್ರ ಕಂಬಿನಿ ಮಿಡಿದಿದ್ದಾರೆ. ಶಿವರಾಜಪುರದಲ್ಲಿ ಸ್ಮಶಾನ ಮೌನ ಆವರಿಸಿದೆ.
ಮಡದಿ , ಇಬ್ಬರು ಹೆಣ್ಣು ಮಕ್ಕಳು ಅಪಾರ ಬಂಧು ಬಳಗವನ್ನು ರಮೇಶ್ ಅಗಲಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು