9:48 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರಿಗೆ ಬೆಂಕಿ: ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಸಜೀವ ದಹನ; ಹೆರಿಗೆ ಆಸ್ಪತ್ರೆಗೆ ಹೋಗುತ್ತಿದ್ದಾಗ ಎದುರಾದ ಜವರಾಯ

02/02/2023, 21:57

ಕಣ್ಣೂರು(reporterkarnataka.com): ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿದ ಪರಿಣಾಮ ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಜೀವಂತ ದಹಿಸಿದ ಹೃದಯವಿದ್ರಾವಕ ಘಟನೆಯ ನೆರೆಯ ಕೇರಳದ ಕಣ್ಣೂರು ಸಾಕ್ಷಿಯಾಯಿತು.

ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಕಾರು ಹೊತ್ತಿ ಉರಿದು ಗರ್ಭಿಣಿ ಹಾಗೂ ಆಕೆ ಪತಿ ಸಜೀವ ದಹನವಾಗಿದ್ದಾರೆ. ಗರ್ಭಿಣಿ ರೀಶಾ (26) ಹಾಗೂ ಆಕೆ ಪತಿ ಪ್ರಿಜಿತ್​(35) ಮೃತರು. ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಮಾರುತಿ ಎಕ್ಸ್ ಪ್ರೆಸ್ಸೋ 2020 ರ ಮಾಡೆಲ್ ಆಗಿದ್ದು, 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದು, ಮಗು ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ದಂಪತಿಗೆ ಕಾರಿನ ಬಾಗಿಲು ತೆಗೆಯಲು ಸಾಧ್ಯವಾಗದೇ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಯಲ್ಲಿ ಪ್ರಿಜೀತ್​ ಹಾಗೂ ರೀಶಾ ಮೃತಪಟ್ಟಿದ್ದರು ಎನ್ನಲಾಗಿದೆ.

ಘಟನೆ ನಡೆಯುತ್ತಿದ್ದ ವೇಳೆಯಲ್ಲಿ ಅಲ್ಲೇ ಇದ್ದ ಸ್ಥಳೀಯರು ದಂಪತಿಯನ್ನು ರಕ್ಷಿಸಲು ಯತ್ನಿಸಿದರಾದರೂ, ಅದು ಸಾಧ್ಯವಾಗಲಿಲ್ಲ. ಸಜೀವ ದಹನದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಬೆಂಕಿಯ ಒಳಗೆ ಸಿಕ್ಕು ಹಾಕಿಕೊಂಡು ದಂಪತಿ ಕಿರುಚಾಡುವ ದೃಶ್ಯಗಳು ಕರಳು ಹಿಂಡುವಂತಿದೆ. ಅನೇಕರು ಕಾರಿನ ಸಮೀಪ ಬಂದರಾದರೂ ಕಾರು ಸ್ಫೋಟಗೊಳ್ಳುವ ಅಪಾಯದಿಂದ ಯಾರೂ ಕೂಡ ಗಾಜು ಒಡೆಯಲು ಹೆದರಿಕೊಂಡಿದ್ದರು.

ಬೆಂಕಿ ಹೊತ್ತಿದ್ದ ವೇಳೆ ಎಲ್ಲರೂ ಅಸಹಾಯಕರಾಗಿದ್ದೆವು. ಕಾರಿನ ಮುಂಭಾಗವು ನೋಡ ನೋಡುತ್ತಿದ್ದಂತೆಯೇ ಬೆಂಕಿಗೆ ಆಹುತಿಯಾಗಿತ್ತು. ಕಾರಿನ ಇಂಧನ​ ಟ್ಯಾಂಕ್​ ಯಾವಾಗ ಬೇಕಿದ್ದರೂ ಸ್ಫೋಟಗೊಳ್ಳಬಹುದಿತ್ತು. ಹೀಗಾಗಿ ನಮಗೆ ದಂಪತಿ ಉಳಿಸಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.
ಕಾರಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕಾರು ಬೆಂಕಿಗೆ ಆಹುತಿಯಾದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಕಣ್ಣೂರು ನಗರ ಪೊಲೀಸ್​ ಕಮಿಷನರ್​​ ಅಜಿತ್​ ಕುಮಾರ್​ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು