3:37 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕಾರಿಗೆ ಡಿಕ್ಕಿ ಹೊಡೆದು ಮಾಯವಾಗಿದ್ದ ಶುನಕ ಅಲ್ಲಿತ್ತು!: ಬಂಪರ್ ಒಳಗೆ ಬರೋಬ್ಬರಿ 70 ಕಿಮೀ ಶ್ವಾನ ಪ್ರಯಾಣ!!

03/02/2023, 10:36

ಪುತ್ತೂರು(reporter Karnataka.com): ನಾಯಿಯೊಂದು ಕಾರಿನ ಬಂಪರಿನಲ್ಲಿ ಬರೋಬ್ಬರಿ 70 ಕಿಮೀ ಪ್ರಯಾಣಿಸಿದ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ನಡೆದಿದೆ. ವಿಚಿತ್ರವೆಂದರೆ ನಾಯಿಗೆ ಯಾವುದೇ ಗಾಯಗಳಾಗದೆ ಸುರಕ್ಷಿತವಾಗಿತ್ತು.

ಪುತ್ತೂರು ಸಮೀಪದ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿತ್ತು. ಸುಬ್ರಹ್ಮಣ್ಯ ಅವರು ತಕ್ಷಣವೇ ಕಾರನ್ನು ನಿಲ್ಲಿಸಿ ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನಾಯಿ ಮಂಗಮಾಯ!. ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿಂದ ಎಲ್ಲಿ ಹೋಯಿತು ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ನಂತರ ಅವರು ಕಾರು ಚಲಾಯಿಸಿಕೊಂಡು ಮನೆಯತ್ತ ಸಾಗಿದರು.

ನೇರವಾಗಿ ಕಬಕದ ತನ್ನ ಮನೆಗೆ ಬಂದ ಸುಬ್ರಹ್ಮಣ್ಯ ದಂಪತಿ ಕಾರನ್ನು ಪರಿಶೀಲಿಸಿದಾಗ ಬಂಪರ್ ನ ಗ್ರಿಲ್ ತುಂಡಾಗಿರುವುದು ಗಮನಿಸಿದರು. ತುಂಡಾದ ಗ್ರಿಲ್ ಸಂದಿನಿಂದ ಬಂಪರೊಳಗೆ ನಾಯಿ ಇರುವುದು ಕಂಡು ಬಂತು. 70 ಕಿಲೋಮೀಟರ್ ಹಿಂದೆ ಕಾರಿಗೆ ಡಿಕ್ಕಿ ಹೊಡೆದ ನಾಯಿ ಅಲ್ಲಿತ್ತು.


ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್ ಗೆ ತೆರಳಿದ ಸುಬ್ರಹ್ಮಣ್ಯ ಅವರು ನಾಯಿಯನ್ನು ಹೊರ ತೆಗೆಯಲು ವಿನಂತಿಸಿದರು. ಗ್ಯಾರೇಜ್ ಮಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರಗೆ ಬರುವಂತೆ ಮಾಡಲಾಯಿತು. ಸುಮಾರು 70 ಕಿಲೊಮೀಟರ್ ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಆರಾಮವಾಗಿ ಹೊರಗೆ ಬಂತು. ನಾಯಿಗೆ ಯಾವುದೇ ಗಾಯಗಳಾಗಿಲ್ಲ ಎನ್ನುವುದು ಸಮಾಧಾನದ ವಿಷಯ.

ಇತ್ತೀಚಿನ ಸುದ್ದಿ

ಜಾಹೀರಾತು