4:00 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ

16/07/2022, 21:46

ಕಾರ್ಕಳ(reporterkarnataka.com):
ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.


ಬೈಂದೂರು ಪೊಲೀಸರು ಜುಲೈ15ರಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿ ನೀಡುವಂತೆ ಕೋರಿದ್ದರು. ಅದರಂತೆ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸದಾನಂದ ಶೇರಿಗಾರ್ ಹಾಗೂ 2ನೇ ಆರೋಪಿ ಶಿಲ್ಪಾ ಈಗಾಗಲೇ ಪೊಲೀಸರ ಕಸ್ಟಡಿಯಲ್ಲಿದ್ದು, ವಿವಿಧ ಆಯಾಮಗಳಲ್ಲಿ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಶನಿವಾರ ಸ್ಥಳ ಬೈಂದೂರಿನಿಂದ ಕಾರ್ಕಳಕ್ಕೆ ಆಗಮಿಸಿದ ಪೋಲೀಸ್ ತನಿಖಾ ತಂಡ ಕಾರ್ಕಳ ನಗರ ಸಭೆ ವ್ಯಾಪ್ತಿ ಯ ಕುಂಟಲ್ಪಾಡಿ ಗ್ಯಾರೇಜ್  ಹಾಗೂ ಹಿರ್ಗಾನ ಶಿವನಗರ ದ ಶಿಲ್ಪಾ ಪೂಜಾರಿ ಮನೆ, ಎಣ್ಣೆಹೊಳೆ ನದಿಯ ಪಕ್ಕದಲ್ಲಿ ಸ್ಥಳ ಬಟ್ಟೆ ಬಿಸಾಡಿದ ಸ್ಥಳವನ್ನು ಮಹಜರು ಮಾಡಲಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು