9:49 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ

16/07/2022, 21:46

ಕಾರ್ಕಳ(reporterkarnataka.com):
ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.


ಬೈಂದೂರು ಪೊಲೀಸರು ಜುಲೈ15ರಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿ ನೀಡುವಂತೆ ಕೋರಿದ್ದರು. ಅದರಂತೆ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸದಾನಂದ ಶೇರಿಗಾರ್ ಹಾಗೂ 2ನೇ ಆರೋಪಿ ಶಿಲ್ಪಾ ಈಗಾಗಲೇ ಪೊಲೀಸರ ಕಸ್ಟಡಿಯಲ್ಲಿದ್ದು, ವಿವಿಧ ಆಯಾಮಗಳಲ್ಲಿ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಶನಿವಾರ ಸ್ಥಳ ಬೈಂದೂರಿನಿಂದ ಕಾರ್ಕಳಕ್ಕೆ ಆಗಮಿಸಿದ ಪೋಲೀಸ್ ತನಿಖಾ ತಂಡ ಕಾರ್ಕಳ ನಗರ ಸಭೆ ವ್ಯಾಪ್ತಿ ಯ ಕುಂಟಲ್ಪಾಡಿ ಗ್ಯಾರೇಜ್  ಹಾಗೂ ಹಿರ್ಗಾನ ಶಿವನಗರ ದ ಶಿಲ್ಪಾ ಪೂಜಾರಿ ಮನೆ, ಎಣ್ಣೆಹೊಳೆ ನದಿಯ ಪಕ್ಕದಲ್ಲಿ ಸ್ಥಳ ಬಟ್ಟೆ ಬಿಸಾಡಿದ ಸ್ಥಳವನ್ನು ಮಹಜರು ಮಾಡಲಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು