6:13 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ

16/07/2022, 21:46

ಕಾರ್ಕಳ(reporterkarnataka.com):
ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.


ಬೈಂದೂರು ಪೊಲೀಸರು ಜುಲೈ15ರಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿ ನೀಡುವಂತೆ ಕೋರಿದ್ದರು. ಅದರಂತೆ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸದಾನಂದ ಶೇರಿಗಾರ್ ಹಾಗೂ 2ನೇ ಆರೋಪಿ ಶಿಲ್ಪಾ ಈಗಾಗಲೇ ಪೊಲೀಸರ ಕಸ್ಟಡಿಯಲ್ಲಿದ್ದು, ವಿವಿಧ ಆಯಾಮಗಳಲ್ಲಿ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಶನಿವಾರ ಸ್ಥಳ ಬೈಂದೂರಿನಿಂದ ಕಾರ್ಕಳಕ್ಕೆ ಆಗಮಿಸಿದ ಪೋಲೀಸ್ ತನಿಖಾ ತಂಡ ಕಾರ್ಕಳ ನಗರ ಸಭೆ ವ್ಯಾಪ್ತಿ ಯ ಕುಂಟಲ್ಪಾಡಿ ಗ್ಯಾರೇಜ್  ಹಾಗೂ ಹಿರ್ಗಾನ ಶಿವನಗರ ದ ಶಿಲ್ಪಾ ಪೂಜಾರಿ ಮನೆ, ಎಣ್ಣೆಹೊಳೆ ನದಿಯ ಪಕ್ಕದಲ್ಲಿ ಸ್ಥಳ ಬಟ್ಟೆ ಬಿಸಾಡಿದ ಸ್ಥಳವನ್ನು ಮಹಜರು ಮಾಡಲಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು