1:06 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು