2:06 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು