6:10 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು