10:34 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು