10:02 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು