1:49 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

‘ಕಾಸ್ಕ್’ ಸಂಸ್ಥೆಯಿಂದ ಮಂಗಳೂರು ಫಳ್ನೀರ್ ನ ಮದರ್ ತೆರೇಸಾ ಹೋಮ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

13/11/2024, 15:30

ಮಂಗಳೂರು(reporterkarnataka.com): ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ‘ಕಾಸ್ಕ್’ ಸಂಸ್ಥೆಯಿಂದ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 10ರಂದು ಜರಗಿತು.
ಈ ಕಾರ್ಯಕ್ರಮವು ನಗರದ ಫಳ್ನೀರ್’ನಲ್ಲಿರುವ ಮದರ್ ತೆರೇಸಾ ಹೋಂನಲ್ಲಿ, ಕಣಚೂರು ಆಸ್ಪತ್ರೆಯ ಸಹಯೋಗದಲ್ಲಿ ನಡೆಯಿತು.
‘ಕಾಸ್ಕ್’ ಉಪಾಧ್ಯಕ್ಷರಾದ ಡಾ. ರೋಹನ್ ಮೋನಿಸ್ ಮತ್ತು ಮಾರ್ಜೋರಿ ಟೆಕ್ಸೇರಾ ಶಿಬಿರದ ನೇತೃತ್ವ ವಹಿಸಿದ್ದರು.
ಕಣಚೂರು ವೈದ್ಯಕೀಯ ಕಾಲೇಜಿನ ತಜ್ಞ ವೈದ್ಯರು ಮತ್ತು ಸಿಬ್ಬಂದಿಯ ತಂಡ 48 ಹಿರಿಯ ನಿವಾಸಿಗಳು ಮತ್ತು 13 ಜನ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಮತ್ತು ಸಮಾಲೋಚನೆಗಳನ್ನು ನೀಡಿತು. ಇದರ ಜೊತೆಗೆ ಶಿಬಿರದಲ್ಲಿನ ಎಲ್ಲಾ ಶಿಬಿರಾರ್ಥಿಗಳಿಗೆ ಉಚಿತ ಔಷಧಗಳನ್ನು ನೀಡಲಾಯಿತು. ನಿವಾಸಿಗಳ ಪೈಕಿ ಕೆಲವರಿಗೆ ಕಣ್ಣಿನ ಪೊರೆಯ ಸಮಸ್ಯೆಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಗುರುತಿಸಲಾಯಿತು.
ಕಣಚೂರು ಮೆಡಿಕಲ್ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಮಾನ್, ‘ಕಾಸ್ಕ್’ ಅಧ್ಯಕ್ಷ ರೋನಾಲ್ಡ್ ಗೋಮ್ಸ್, ಮದರ್ ತೆರೇಸಾ ಹೋಮ್, ಫಳ್ನೀರ್‌ನ ಮದರ್ ಸುಪೀರಿಯರ್ ಸಿಸ್ಟರ್ ಯೇಸು ತೆರೇಸಾ ಸೇರಿದಂತೆ ಗಣ್ಯ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಕಾಸ್ಕ್’ ಕೋಶಾಧಿಕಾರಿ ರೊನಾಲ್ಡ್ ಮೆಂಡೊನ್ಸಾ, ಕಾರ್ಯದರ್ಶಿ ಪೀಟರ್ ಪಿಂಟೊ, ಸಮಿತಿ ಸದಸ್ಯರಾದ ಪ್ರೊಫೆಸರ್ ಜೆರಾರ್ಡ್ ಡಿ’ಸೋಜಾ, ಇಯಾನ್ ಲೋಬೊ, ಮಾರ್ಸೆಲ್ ಮೊಂತೇರೊ, ಡಾ. ಹೆನ್ರಿಕ್ ಲೋಬೊ, ಡಾ. ಎರಿಕ್ ಲೋಬೊ, ಸದಸ್ಯರಾದ ಅನಿತಾ ಗೋಮ್ಸ್ ಮತ್ತು ನೀನಾ ಮೊಂತೇರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು