7:39 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

10/10/2025, 13:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾವೇರಿ ಸಂಕ್ರಮಣದ ಹಿನ್ನೆಲೆಯಲ್ಲಿ ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕಾವೇರಿ ತುಲಾ ಸಂಕ್ರಮಣ ಪ್ರಯುಕ್ತ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿ ಅ. 17ರಂದು ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಸರಕಾರ 2024ರಲ್ಲಿ ಬಿಡುಗಡೆ ಮಾಡಿದ್ದ 2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಅ. 18 ರಂದು ಕಾವೇರಿ ಸಂಕ್ರಮಣಕ್ಕೆ ಕೊಡಗಿನಲ್ಲಿ ಸಾರ್ವತ್ರಿಕ ರಜೆ ಎಂದು ತಿಳಿಸಲಾಗಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ದಿನಾಂಕ 17-10-2025ರಂದು ಮಧ್ಯಾಹ್ನ 1.44 ರ ಸಮಯದಲ್ಲಿ ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವ ಆಗಲಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗರಾರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಸರಕಾರದ ಗಮನ ಸೆಳೆದಿದ್ದರು. ಹೀಗಾಗಿ ಮೊದಲು ಹೊರಡಿಸಲಾಗಿದ್ದ ರಜೆ ದಿನಗಳ ಆದೇಶವನ್ನು ತಿದ್ದುಪಡಿಗೊಳಿಸಿ ಅ. 18ರ ಬದಲಿಗೆ ಅ 17ರಂದು ರಜೆ ಘೋಷಣೆ ಮಾಡಲಾಗಿದೆ. ಸರಕಾರದ ಹೊಸ ತಿದ್ದುಪಡಿಯ ಆದೇಶದಂತೆ ಕೊಡಗು ಜಿಲ್ಲೆಯಾದ್ಯಂತ ಅ 17 ರಂದು ಸಾರ್ವಜನಿಕ ರಜೆಯಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು