8:27 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ

10/10/2025, 13:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾವೇರಿ ಸಂಕ್ರಮಣದ ಹಿನ್ನೆಲೆಯಲ್ಲಿ ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕಾವೇರಿ ತುಲಾ ಸಂಕ್ರಮಣ ಪ್ರಯುಕ್ತ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿ ಅ. 17ರಂದು ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ಸರಕಾರ 2024ರಲ್ಲಿ ಬಿಡುಗಡೆ ಮಾಡಿದ್ದ 2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಅ. 18 ರಂದು ಕಾವೇರಿ ಸಂಕ್ರಮಣಕ್ಕೆ ಕೊಡಗಿನಲ್ಲಿ ಸಾರ್ವತ್ರಿಕ ರಜೆ ಎಂದು ತಿಳಿಸಲಾಗಿತ್ತು. ಆದರೆ ಪ್ರಸಕ್ತ ವರ್ಷದಲ್ಲಿ ದಿನಾಂಕ 17-10-2025ರಂದು ಮಧ್ಯಾಹ್ನ 1.44 ರ ಸಮಯದಲ್ಲಿ ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವ ಆಗಲಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗರಾರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಸರಕಾರದ ಗಮನ ಸೆಳೆದಿದ್ದರು. ಹೀಗಾಗಿ ಮೊದಲು ಹೊರಡಿಸಲಾಗಿದ್ದ ರಜೆ ದಿನಗಳ ಆದೇಶವನ್ನು ತಿದ್ದುಪಡಿಗೊಳಿಸಿ ಅ. 18ರ ಬದಲಿಗೆ ಅ 17ರಂದು ರಜೆ ಘೋಷಣೆ ಮಾಡಲಾಗಿದೆ. ಸರಕಾರದ ಹೊಸ ತಿದ್ದುಪಡಿಯ ಆದೇಶದಂತೆ ಕೊಡಗು ಜಿಲ್ಲೆಯಾದ್ಯಂತ ಅ 17 ರಂದು ಸಾರ್ವಜನಿಕ ರಜೆಯಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು