5:59 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ

27/09/2024, 14:18

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಆದೇಶ ಮಾಡಿದ್ದು ಸರಿ ಎಂದು ಹೈಕೋರ್ಟ್ ಹೇಳಿದೆ. ಬಿಜೆಪಿಯವರು ಹೇಳಿ ಮಾಡಿದ್ದಲ್ಲ, ಹೈಕೋರ್ಟ್ ಜೊತೆಗೆ ಜನಪ್ರತಿನಿಧಿಗಳ ಕೋರ್ಟ್ ಕೂಡ ಹೇಳಿದೆ. ಆದರ ಜೊತೆಗೆ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದವರ ಮೇಲೆ ಯಾವ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಸಹ ಕೋರ್ಟ್ ಹೇಳಿದೆ ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾನು ಯಾವುದೇ ತನಿಖೆಗೆ ಸಿದ್ದನಾಗಿದ್ದೇನೆ ಎಂದು ಹೇಳುವ ಮುಖ್ಯಮಂತ್ರಿಗಳೇ ತನಿಖೆ ಆಗಬಾರದೆಂದು ಕೋರ್ಟ್ ಗೆ ಹೋಗಿದ್ದು, ತನಿಖೆಗೆ ಸ್ಪಂದನೆ ನೀಡುವುದಾದರೆ ಇವರು ಕ್ಯಾಬಿನೆಟ್ ಸಭೆಯಲ್ಲಿ ನಲ್ಲಿ ಸಿಬಿಐ ಬರಬಾರದು ಎಂದು ಬೇಲಿ ಕಟ್ಟಿದ್ಯಾಕೆ? ಸಿಬಿಐ ಬಂದರೆ ಭಯ ಯಾಕೆ? ರಾಜ್ಯಪಾಲರು ನೇರವಾಗಿ ಮುಖ್ಯಮಂತ್ರಿಗಳ ಸಲಹೆಗಾರರು ಬಳಿ ಕೇಳುವಂತಿಲ್ಲ, ಮಂತ್ರಿಗಳ ಜೊತೆಗೆ ಚರ್ಚೆ ಆಗಬೇಕು ಇದೆಲ್ಲಾ ಯಾಕೆ ಎಂದು ಪ್ರೆಶ್ನೆ ಮಾಡಿದರು.
ಸಿದ್ದರಾಮಯ್ಯನವರು 50-60 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲ ಎನ್ನುವವರು ಬಟ್ಟೆ ತುಂಬಾ ಬಣ್ಣ ಮಾಡಿಕೊಂಡಿದ್ದಾರೆ. ಲೋಕಾಯುಕ್ತವನ್ನು ಇವರೇ ಕತ್ತು ಹಿಸುಕಿ ಎಸಿಬಿ ಮಾಡಿದ್ದರು. ಕೋರ್ಟ್ ಆದೇಶದ ಮೇಲೆ ಮತ್ತೆ ಲೋಕಾಯುಕ್ತ ಮಾಡಿದರು. ಮೊದಲಿಂದಲೂ ಇವರು ಮಾಡಿದ ಅಪರಾಧ ಯಾರು ತನಿಖೆ ಮಾಡಬಾರದು ಎಂದೆ ಬಂದವರು. ಲೋಕಾಯುಕ್ತದ ಪೊಲೀಸರು ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುತ್ತದೆ.ಹಾಗಾಗಿ ಮುಖ್ಯಮಂತ್ರಿಯನ್ನು ಹೇಗೆ ತನಿಖೆ ಮಾಡುತ್ತಾರೆ, ಸರಿಯಾಗಿ ತನಿಖೆ ನಡೆಯಬೇಕು ಎಂದರೆ ಸಿಬಿಐ ತನಿಖೆ ನಡೆಸಲಿ ಎಂದರು.
ಸಿಬಿಐಗೆ ಕೊಡುವುದಾದರೆ ನಾವು ಒಪ್ಪದೇ ಕೊಡುವಹಾಗಿಲ್ಲ ಎನ್ನುತ್ತಾರೆ, ಇವರ ಮೇಲಿನ ತನಿಖೆಗೆ ಇವರೇ ಒಪ್ಪಬೇಕಂತೆ, ರಾಜ್ಯದಲ್ಲಿ ಅವರ ಕಾರ್ಯಕರ್ತರು ನಾವು ಮುಖ್ಯಮಂತ್ರಿಗಳ ಹಿಂದೆ ಇದ್ದೇವೆ ಎನ್ನುತ್ತಾರೆ,136 ಜನ ಶಾಸಕರು ಅವರ ಜೊತೆ ಇದ್ದಾರಂತೆ, ಇವರೆಲ್ಲಾ ಸೇರಿದ್ರೆ ಸಾಕು ಕೋರ್ಟ್ ಆದೇಶ ಬೇಡ, ವಾರ ಕುಂ ಮಾಫ್,ಏನೇ ಅಪರಾಧ ಮಾಡಿದರು ಇವರ ಬೆಂಬಲ ಇದ್ದರೆ ಸಾಕು, ಹೊಸ ವ್ಯಾಖ್ಯಾನವನ್ನು ರಾಜ್ಯದ ಜನರಿಗೆ ಹೇಳಲು ಹೊರಟಿದ್ದಾರೆ. ಮುಖ್ಯಮಂತ್ರಿ ಆದವರು 420 ಸೆಕ್ಷನ್ ಹಾಕಿಕೊಂಡು ಆ ಕುರ್ಚಿಯಲ್ಲಿ ಕೂರಬಾರದು, ಅವರ ಬಗ್ಗೆ ಗೌರವವಿದೆ, ಕೇಸ್ ಮುಗಿಸಿಕೊಂಡು, ಕಳಂಕ ರಹಿತರಾಗಿ ಬಂದು ಮುಖ್ಯಮಂತ್ರಿ ಆಗಲಿ ಆದರೆ ಈಗ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ನೀಡಲಿ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು