8:19 AM Thursday24 - July 2025
ಬ್ರೇಕಿಂಗ್ ನ್ಯೂಸ್
ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.… ಐಟಿಐ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜತೆ ರಾಜ್ಯ… ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಸಚಿವ ಡಾ. ಶರಣಪ್ರಕಾಶ್‌… Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ…

ಇತ್ತೀಚಿನ ಸುದ್ದಿ

ಸಿಬಿಎಸ್‌ಇ ಬೋರ್ಡ್ ಪರೀಕ್ಷೆ: ಕೆನರಾ ಹೈಸ್ಕೂಲ್ ಅತ್ಯುತ್ತಮ ಸಾಧನೆ

15/05/2023, 10:23

ಮಂಗಳೂರು(reporterlarnataka.com): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 2023 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಕೆನರಾ ಹೈ ಸ್ಕೂಲ್ (ಸಿಬಿಎಸ್ಇ ) ಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. 120 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣಗೊಂಡು 100% ಫಲಿತಾಂಶ ಬಂದಿದೆ. 117 ವಿದ್ಯಾರ್ಥಿಗಳು 60% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿದ್ದಾರೆ. 10 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸಾರಂಗ ರಾವ್ ಇನೊಳಿ(97%), ದಿಯಾ ಎನ್ ಕಾಮತ್(96.8%), ಜಾಹ್ನವಿ ಶೆಣೈ(96.6%), ವಾರುಣಿ ಸುರೇಶ್(96%), ಆರ್ಯನ್ ಎಂ(96%), ವಿ ಸಾಯಿ ವಿಜ್ವಲ್ ಕಾರ್ತಿಕ್(96%), ಸತ್ಯಪ್ರಸಾದ್ ಜಿ ಪೈ(95.8%), ಕೆ ಆಕಾಶ್ ಎಂ ರಾವ್(95.4%), ಕಾತ್ಯಾಯಿನಿ ಎಸ್ ಪೈ(95.4%), ತುಳಸಿ ಹರಿಪ್ರಸಾದ್ (95.4%) ಅಂಕಗಳನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. 24 ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು, 23 ವಿದ್ಯಾರ್ಥಿಗಳು 85%ಕ್ಕಿಂತ ಹೆಚ್ಚು, 60 ವಿದ್ಯಾರ್ಥಿಗಳು 60%ಕ್ಕಿಂತ ಹೆಚ್ಚು, ಹಾಗು 3 ವಿದ್ಯಾರ್ಥಿಗಳು 48% ಗಿಂತ ಹೆಚ್ಚು ಪಡೆದುಕೊಂಡಿದ್ದಾರೆ.2015 ರ ಈ ಸಂಸ್ಥೆಯ ಮೊದಲ ಬ್ಯಾಚ್ 100 ಶೇಕಡ ಫಲಿತಾಂಶ ಪಡೆದುಕೊಂಡಿದ್ದು ಅದರ ನಂತರ ಪ್ರತಿವರ್ಷ ಕೂಡ ಅತ್ಯುತ್ತಮ ಸಾಧನೆಯನ್ನು ಮಾಡುತ್ತಾ ಬಂದಿದೆ. ಈ ಸಾಧನೆಗೆ ವಿದ್ಯಾರ್ಥಿಗಳ ಶ್ರಮ, ಶಿಕ್ಷಕ ವರ್ಗದ ಪ್ರೋತ್ಸಾಹ, ಅತ್ಯುತ್ತಮ ಬೋಧನಾ ಕ್ರಮ, ಆಡಳಿತ ಮಂಡಳಿಯ ಸಹಕಾರ, ಪೋಷಕರ ಕಾಳಜಿ ಇವೆಲ್ಲವೂ ಕಾರಣವಾಗಿರುತ್ತದೆ. ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕವರ್ಗವನ್ನು ಕೆನರಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು