1:21 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಸಿಬಿ ಕಾರ್ಯಾಚರಣೆ: ದರೋಡೆಗೆ ಸಂಚು ರೂಪಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 25.90 ಲಕ್ಷ ಮೌಲ್ಯದ ಸೊತ್ತು ವಶ

10/06/2024, 12:37

ಮಂಗಳೂರು(reporterkarnataka.com): ನಗರದ ಹೊರವಲಯದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮುಕ್ಕಚರಿಯ ಮುಹಮ್ಮದ್ ಸಮೀರ್ ಅಲಿ ಅಲಿಯಾಸ್ ಕಡಪರ ಸಮೀರ್(33), ಉಳ್ಳಾಲ ಬೋಲಿಯಾರ್ ಮೊಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರು ಮನ್ಸೂರು(30) ಹಾಗೂ ಕೊಣಾಜೆ ಮಲಾರದ ಮೊಹಮ್ಮದ್ ನೌಷಾದ್(30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 25,90,000/ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.ಆರೋಪಿಗಳ ಪೈಕಿ ಮುಹಮ್ಮದ್ ಸಮೀರ್ ಅಲಿ ಅಲಿಯಾಸ ಕಡಪರ ಸಮೀರ್ ಎಂಬಾತನು ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಇಲ್ಯಾಸ್ ಕೊಲೆ ಪ್ರಕರಣ, ಫಳ್ನೀರ್ ನ ಶಾಪ್ ವೊಂದರಲ್ಲಿ ನಡೆದ ಶೂಟ್ಔಟ್ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ದಾಖಲಾದ ಜೀವ ಬೆದರಿಕೆ ಪ್ರಕರಣ ಹೀಗೆ ಒಟ್ಟು 7 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಇನ್ನೋರ್ವ ಆರೋಪಿ ಮೊಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದರೋಡೆ, ಹಲ್ಲೆ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಫಳ್ನೀರ್ ಶೂಟ್ಔಟ್ ಪ್ರಕರಣ, ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿರುತ್ತಾನೆ. ಆರೋಫಿ ಮೊಹಮ್ಮದ್ ನೌಷದ್ ಎಂಬಾತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಭಾಗಿರುತ್ತಾನೆ.


ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು