4:21 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 1.62 ಕೋಟಿ ಮೌಲ್ಯದ ಸೊತ್ತು ವಶ

25/11/2023, 21:33

ಮಂಗಳೂರು(reporterkarnataka.com): ಕೋಟ್ಯಂತರ ರೂಪಾಯಿ ಬೆಲೆಬಾಳುವ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ನಗರದ ಪಂಪ್ ವೆಲ್ ಬಳಿ
ಶನಿವಾರ ಬಂಧಿಸಲಾಗಿದೆ.


ಬಂಧಿತರನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ನಿವಾಸಿಯಾದ ಪ್ಯಾರೇಜಾನ್ ಅಲಿಯಾಸ್ ಸೇಟು(37), ಮಂಗಿಲಪದವು ಸಮೀಪದ ಪಾತಿರತೋಟ ಹೌಸ್ ನಿವಾಸಿಯಾದ ಬದ್ರುದ್ದೀನ್ ಅಲಿಯಾಸ್ ಬದ್ರು (28 ) ಹಾಗೂ ತಮಿಳುನಾಡು ನಾಗಪಟ್ಟಿನಂ ಜಿಲ್ಲೆಯ ರಾಜೇಶ್.ಆರ್.(22) ಎಂದು ಗುರುತಿಸಲಾಗಿದೆ.
ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ. ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು