2:00 AM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85 ಲಕ್ಷ ರೂ. ಮೌಲ್ಯದ ಸೊತ್ತು ವಶ

15/05/2024, 21:52

ಮಂಗಳೂರು(reporterkarnataka.com): ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪೊಲೀಸರ ಬಂಧಿಸಿದ್ದಾರೆ. ಬಂಧಿತರಿಂದ 270 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ದೇರಳಕಟ್ಟೆಯ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಆರೋಪಿಗಳಾದ ಬಿಜೈ ನ್ಯೂರೋಡಿನ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ಗ್ರಾಮದ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ಸಮೀಪದ ಮೊಹಮ್ಮದ್ ನೌಮಾನ್(22) ಹಾಗೂ ಬೋಳಿಯಾರ್ ಸಮೀಪದ ಮೊಹಮ್ಮದ್ ಸಫೀಲ್(23) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ,4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ 2021ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.


ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು