12:43 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ; 95 ಲಕ್ಷ ರೂ. ಮೌಲ್ಯದ ಸೊತ್ತು ವಶ

06/11/2023, 23:37

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಒಟ್ಟು 95 ಸಾವಿರ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ 3 ಜನ ವ್ಯಕ್ತಿಗಳು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೌಲ್ಯ 95 ಸಾವಿರ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಡಿಕೇರಿ ಪ್ರಮೋದ್ ಎಮ್.ಜಿ.(30), ಮೊಹಮ್ಮದ್ ರಾಶೀದ್ (41) ಹಾಗೂ ದರ್ಶನ್ ಎಸ್.(24) ಎಂದು ಗುರುತಿಸಲಾಗಿದೆ.
ಆರೋಪಿತರಲ್ಲಿ ಪ್ರಮೋದ್ ಎಮ್. ಜಿ. ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ರಾಶೀದ್ ಎಂ.ಝಡ್ ಎಂಬಾತನ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿರುತ್ತವೆ. ದರ್ಶನ್ ಎಸ್. ಎಂಬಾತನ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು