6:12 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲವೇ ಚೈತ್ರಾ ಕುಂದಾಪುರ?: ಏನು ಕೇಳಿದ್ರೂ ಸ್ವಾಮೀಜಿಯ ಕೇಳಿ ಎನ್ನುತ್ತಿದ್ದಾಳಂತೆ ಆಕೆ!

15/09/2023, 15:56

ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರು ಸಿಸಿಬಿ ಪೊಲೀಸರ ಮುಂದೆ ಯಾವುದೇ ಹೇಳಿಕೆ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.
ನ್ಯಾಯಾಲಯ ಚೈತ್ರಾ ಕುಂದಾಪುರಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೂ ಆಕೆ ಪೊಲೀಸರ ಮುಂದೆ ಬಾಯಿ ಬಿಚ್ಚುತ್ತಿಲ್ಲ. ಸಿಸಿಬಿ ಪೊಲೀಸರು ತೀವ್ರ ತನಿಖೆಗೆ ಒಳಪಡಿಸಿದರೂ ಆಕೆ ಯಾವುದೇ ಉತ್ತರ ನೀಡುತ್ತಿಲ್ಲ. ಯಾವುದೇ ಪ್ರಶ್ನೆ ಕೇಳಿದರೂ ಸ್ವಾಮೀಜಿಯನ್ನು ಕೇಳಿ ಎಲ್ಲಾ ಗೊತ್ತಾಗುತ್ತದೆ ಎಂದು ಚೈತ್ರಾ ಉತ್ತರಿಸುತ್ತಿದ್ದಾಳಂತೆ. ಅದ್ದರಿಂದ ಯಾವುದೇ ಹೇಳಿಕೆ ದಾಖಲಿಸಿಕೊಳ್ಳಲು ಇದುವರೆಗೆ ಪೊಲೀಸರಿಗೆ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮಧ್ಯೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆ ವಿಚಾರಣೆಗೆ ಬರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು