2:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16 ಲಕ್ಷ ರೂ. ಮೌಲ್ಯದ ಸೊತ್ತು ವಶ

01/05/2024, 21:55

ಮಂಗಳೂರು(reporterkarnataka.com): ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದು, ಬಂಧಿತರಿಂದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಬಸ್ತಿಪಡ್ಪು ದರ್ಗಾ ರೋಡ್ ನಿವಾಸಿ
ಮೊಹಮ್ಮದ್ ಇಶಾನ್ (35) ಹಾಗೂ ಉಳ್ಳಾಲ ಟಿ.ಸಿ. ರೋಡ್ ಅಕ್ಕರೆಕೆರೆ ನಿವಾಸಿ ಜಾಫರ್ ಸಾಧಿಕ್ (35 ) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿತರಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ16,13,800/- ರೂ. ಎಂದು ಅಂದಾಜಿಸಲಾಗಿದೆ. ಆರೋಪಿತರಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತವೆ.


ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು