10:50 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

23/12/2024, 23:39

ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು,
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು