2:13 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

23/12/2024, 23:39

ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು,
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು