1:09 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

23/12/2024, 23:39

ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು,
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು