8:33 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಐಷಾರಾಮಿ ಕಾರು ಅವಘಡ : ನಜ್ಜುಗುಜ್ಜಾದ ಕ್ಯಾಬ್

27/09/2021, 11:41

ಬೆಂಗಳೂರು (Reporterkarnataka.com) ಇತ್ತೀಚೆಗೆ ನಡೆದ ತಮಿಳು ನಾಡು ಶಾಸಕನ ಮಗನ ಐಷಾರಾಮಿ ಕಾರು ಅಪಘಾತದ ಸುದ್ದಿ ಹಸಿಯಾಗಿರಯವಾಗಲೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. 

ವೀಕೆಂಡ್‌ನಲ್ಲಿ ಮೋಜು ಮಸ್ತಿಗಾಗಿ ತಮ್ಮ ಬಳಿ ಇರುವ ಐಷಾರಾಮಿ ಕಾರುಗಳನ್ನು ರೋಡಿಗಿಳಿಸೋ ದೊಡ್ಡವರ ಮಕ್ಕಳು, ರ‍್ಯಾಷ್ ಡ್ರೈವಿಂಗ್ ಮಾಡಿ ಅಪಘಾತ ಮಾಡುತ್ತಿರುವುದು ಇನ್ನೂ ನಿಂತಿಲ್ಲ. ಪದೇ ಪದೇ ಭೀಕರ ಅಪಘಾತಗಳು ಸಂಭವಿಸಿ ದುರಂತಗಳು ನಡೀತಿದ್ರು ನಗರದಲ್ಲಿ ಯುವಜನತೆ ಮಾತ್ರ ಬುದ್ದಿ ಕಲೀತಿಲ್ಲ. ಬೆಂಗಳೂರಿನಲ್ಲಿ ಐಷಾರಾಮಿ ಕಾರು ಮಾಲೀಕರ ಶೋಕಿ ಮುಂದುವರಿದಿದ್ದು, ಯಾವುದಕ್ಕೂ ಕೇರ್ ಮಾಡ್ತಿಲ್ಲ.

ನಿನ್ನೆ ತಡರಾತ್ರಿ ಬೆಂಗಳೂರಿನ ದೊಮ್ಮಲೂರು ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಪೋರ್ಷೇ ಕಾರು ಇಟಿಯೋಸ್ ಕ್ಯಾಬ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ನಂತರ ಕಮಾಂಡೋ ಆಸ್ಪತ್ರೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಟಿಯೋಸ್ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಒಂದೂವರೆ ಕೋಟಿ ಮೌಲ್ಯದ ಪೋರ್ಷೇ ಕಂಪನಿಯ ಈ ರೇಸ್ ಕಾರು ೨ ಆಸನಗಳನ್ನು ಹೊಂದಿದೆ. ೩,೯೯೫ ಸಿಸಿಯ ಸಾಮರ್ಥ್ಯವನ್ನು ಹೊಂದಿರುವ ಪೋರ್ಷೇ ಕಾರು ಡಿಕ್ಕಿಯ ರಭಸಕ್ಕೆ ಮುಂಭಾಗದ ಎಂಜಿನ್, ಗೇರ್ ಬಾಕ್ಸ್, ೨ ಚಕ್ರಗಳಿಗೆ ಹಾನಿಯಾಗಿದೆ. ಇನ್ನು ಇಟಿಯೋಸ್ ಕ್ಯಾಬ್ ಹಿಂಬದಿ ಸಂಪೂರ್ಣ ಜಖಂ ಆಗಿದ್ದು ಚಾಲಕ ಕೃಷ್ಣಮೂರ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೂ ಉದ್ಯಮಿ ಮಗ ಜವೇರಾ ಮೆವಾನಿ ಪೋರ್ಷೇ ಕಾರನ್ನು ಡ್ರಂಕ್ & ಡ್ರೈವ್ ಮಾಡಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಹಲಸೂರು ಟ್ರಾಫಿಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.. ಇನ್ನೂ ಕಾರಿನಲ್ಲಿದ್ದ ಜವೇರ್ ಪತ್ನಿ ಶ್ರೇಯಾಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು