2:44 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಐಷಾರಾಮಿ ಕಾರು ಅವಘಡ : ನಜ್ಜುಗುಜ್ಜಾದ ಕ್ಯಾಬ್

27/09/2021, 11:41

ಬೆಂಗಳೂರು (Reporterkarnataka.com) ಇತ್ತೀಚೆಗೆ ನಡೆದ ತಮಿಳು ನಾಡು ಶಾಸಕನ ಮಗನ ಐಷಾರಾಮಿ ಕಾರು ಅಪಘಾತದ ಸುದ್ದಿ ಹಸಿಯಾಗಿರಯವಾಗಲೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. 

ವೀಕೆಂಡ್‌ನಲ್ಲಿ ಮೋಜು ಮಸ್ತಿಗಾಗಿ ತಮ್ಮ ಬಳಿ ಇರುವ ಐಷಾರಾಮಿ ಕಾರುಗಳನ್ನು ರೋಡಿಗಿಳಿಸೋ ದೊಡ್ಡವರ ಮಕ್ಕಳು, ರ‍್ಯಾಷ್ ಡ್ರೈವಿಂಗ್ ಮಾಡಿ ಅಪಘಾತ ಮಾಡುತ್ತಿರುವುದು ಇನ್ನೂ ನಿಂತಿಲ್ಲ. ಪದೇ ಪದೇ ಭೀಕರ ಅಪಘಾತಗಳು ಸಂಭವಿಸಿ ದುರಂತಗಳು ನಡೀತಿದ್ರು ನಗರದಲ್ಲಿ ಯುವಜನತೆ ಮಾತ್ರ ಬುದ್ದಿ ಕಲೀತಿಲ್ಲ. ಬೆಂಗಳೂರಿನಲ್ಲಿ ಐಷಾರಾಮಿ ಕಾರು ಮಾಲೀಕರ ಶೋಕಿ ಮುಂದುವರಿದಿದ್ದು, ಯಾವುದಕ್ಕೂ ಕೇರ್ ಮಾಡ್ತಿಲ್ಲ.

ನಿನ್ನೆ ತಡರಾತ್ರಿ ಬೆಂಗಳೂರಿನ ದೊಮ್ಮಲೂರು ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಪೋರ್ಷೇ ಕಾರು ಇಟಿಯೋಸ್ ಕ್ಯಾಬ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ನಂತರ ಕಮಾಂಡೋ ಆಸ್ಪತ್ರೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಇಟಿಯೋಸ್ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಒಂದೂವರೆ ಕೋಟಿ ಮೌಲ್ಯದ ಪೋರ್ಷೇ ಕಂಪನಿಯ ಈ ರೇಸ್ ಕಾರು ೨ ಆಸನಗಳನ್ನು ಹೊಂದಿದೆ. ೩,೯೯೫ ಸಿಸಿಯ ಸಾಮರ್ಥ್ಯವನ್ನು ಹೊಂದಿರುವ ಪೋರ್ಷೇ ಕಾರು ಡಿಕ್ಕಿಯ ರಭಸಕ್ಕೆ ಮುಂಭಾಗದ ಎಂಜಿನ್, ಗೇರ್ ಬಾಕ್ಸ್, ೨ ಚಕ್ರಗಳಿಗೆ ಹಾನಿಯಾಗಿದೆ. ಇನ್ನು ಇಟಿಯೋಸ್ ಕ್ಯಾಬ್ ಹಿಂಬದಿ ಸಂಪೂರ್ಣ ಜಖಂ ಆಗಿದ್ದು ಚಾಲಕ ಕೃಷ್ಣಮೂರ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನೂ ಉದ್ಯಮಿ ಮಗ ಜವೇರಾ ಮೆವಾನಿ ಪೋರ್ಷೇ ಕಾರನ್ನು ಡ್ರಂಕ್ & ಡ್ರೈವ್ ಮಾಡಿರುವುದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಹಲಸೂರು ಟ್ರಾಫಿಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.. ಇನ್ನೂ ಕಾರಿನಲ್ಲಿದ್ದ ಜವೇರ್ ಪತ್ನಿ ಶ್ರೇಯಾಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು