4:13 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್ ಜಿ ಯೋಜನೆ ಜಾರಿ: ಹರ್ಷವರ್ಧನ್

30/01/2026, 17:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2047ರ ವಿಕಸಿತ ಭಾರತದ ಪರಿಕಲ್ಪನೆ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್ ಜಿ ಎಂಬ ಮಹತ್ವಾಕಾಂಕ್ಷೆ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಮಾಜಿ ಶಾಸಕ ಬಿ ಹರ್ಷವರ್ಧನ್ ಹೇಳಿದರು.
ನಂಜನಗೂಡು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಹಿಂದಿನ ಮನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಶೇಕಡ 90ರಷ್ಟು ಅನುದಾನ ಪಡೆದು ವ್ಯಾಪಕ ಭ್ರಷ್ಟಾಚಾರ ಹಾಗೂ ಅಕ್ರಮ ನಡೆಸಲಾಗುತ್ತಿತ್ತು. ಕಾರ್ಮಿಕರ ನಕಲಿ ಖಾತೆಗಳನ್ನು ತೆರೆದು ಗುತ್ತಿಗೆದಾರದಿಂದ ಹಣ ಲೂಟಿ ಮಾಡಲಾಗುತ್ತಿತ್ತು. ಇದೆಲ್ಲವನ್ನು ಮನಗಂಡ ಕೇಂದ್ರ ಸರ್ಕಾರ ಕೆಲವು ಮಹತ್ವ ಪೂರ್ಣ ಯೋಜನೆಗಳೊಂದಿಗೆ ಇದನ್ನು ಅನುಷ್ಠಾನಗೊಳಿಸಲಾಗಿದೆ.
ಅಲ್ಲದೆ ನೂರು ದಿನಕ್ಕೆ ಬದಲಾಗಿ 125 ದಿನ ಉದ್ಯೋಗ ನೀಡಲು ಮುಂದಾಗಿದೆ 14 ವರ್ಷದಲ್ಲಿ ಕೇಂದ್ರ ಸರ್ಕಾರದ ಯಾವುದೇ ಭ್ರಷ್ಟಾಚಾರ ಆರೋಪ ಮಾಡಲು ಸಾಧ್ಯವಾಗದ ಕಾಂಗ್ರೆಸ್ ಇದನ್ನು ಟೀಕೆ ಮಾಡುವ ಮೂಲಕ ರಾಜಕೀಯ ಪ್ರೇರಿತ ಆಪಾದನೆಯಲ್ಲಿ ತೊಡಗಿದೆ ಎಂದು ಕಿಡಿ ಕಾರಿದರು.
ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಸುಣ್ಣ ಬಣ್ಣ ಹೊಡೆಯಲು ಸಿದ್ದರಾಮಯ್ಯನವರ ಸರ್ಕಾರದಲ್ಲಿ ದುಡ್ಡಿಲ್ಲ. ಆದರೆ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರಿಡುತ್ತಾರಂತೆ. ಇಡಲಿ ಇದರ ಬಗ್ಗೆ ನಮ್ಮ ತಕರಾರಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಬಿಜೆಪಿಯಲ್ಲಿ ಗುಂಪುಗಾರಿಕೆ ಹಾಗೂ ಬಣಗಳ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಮ್ಮಲ್ಲಿ ಅಂತಹ ಯಾವುದೇ ಬಣಗಳಿಲ್ಲ ಬಿಜೆಪಿ ಒಂದೇ ಬಣ ಎಂದು ತಿಳಿಸುತ್ತಾ ಕಾಂಗ್ರೆಸ್ನಲ್ಲೂ ಕೂಡ ಶಾಸಕರ ಬಣ, ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸಂಸದರ ಬಣಗಳಿಲ್ಲವೇ ಎಂದು ಮಾರ್ಮಿಕವಾಗಿ ನುಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ನ ಉಪಾಧ್ಯಕ್ಷರಾದ ಸದಾನಂದ ಮಾತನಾಡಿ ರಾಜ್ಯಸಭೆ ಹಾಗೂ ಲೋಕಸಭೆಗಳಲ್ಲಿ ವಿಸ್ತೃತವಾಗಿ ಚರ್ಚಿಸಿ ರಾಷ್ಟ್ರಪತಿಗಳಿಂದ ಅಂಕಿತ ಪಡೆದು ಜಾರಿಯಾದ ಈ ಯೋಜನೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಕೇಂದ್ರದಿಂದ ಶೇಕಡ 90ರಷ್ಟು ಅನುದಾನ ಪಡೆದು ಮನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಸಲಾಗುತ್ತಿತ್ತು ಆದರೆ ಈಗ ಬಯೋಮೆಟ್ರಿಕ್ ಜಾರಿಗೆ ತಂದಿರುವುದಲ್ಲದೆ ರಾಜ್ಯ ಸರ್ಕಾರ 40% ಅನುದಾನ ನೀಡಬೇಕಾಗಿರುವುದರಿಂದ ಹಣ ನೀಡಲು ಹಾಗು ಹಣ ಒಡೆಯಲು ಆಗದೆ ಈ ರೀತಿ ವಿರೋಧ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.


ಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಂಜನಗೂಡು ಉಸ್ತುವಾರಿ ಕೋಟೆ ವೆಂಕಟಸ್ವಾಮಿ, ಗ್ರಾಮಾಂತರ ಕಾರ್ಯದರ್ಶಿ ವಿನಯ್, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ಮುಖಂಡರುಗಳಾದ ಹೊನ್ನಗೆರೆ ಪುಟ್ಟಸ್ವಾಮಿ,ಎಮ್ಮರಗಾಲ ಶಿವಣ್ಣ, ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು