2:57 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಭಾರತ್ ರೈಸ್ ಮಾರಾಟ ತಾತ್ಕಾಲಿಕ ಸ್ಥಗಿತ: ಭಾರೀ ಬೇಡಿಕೆಯಿತ್ತು ಕೆಜಿಗೆ 29 ರೂ.ಗೆ ಸಿಗುತ್ತಿದ್ದ ಅಕ್ಕಿಗೆ

04/07/2024, 17:14

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಕೆಜಿಗೆ 29 ರೂ.ಗಳ ಈ ಅಕ್ಕಿಗೆ ಬಹಳ ಬೇಡಿಕೆ ಇತ್ತು. ಆಧಾರ್ ಕಾರ್ಡ್ ನಂಬರ್ ಹೇಳಿ 10 ಕೆಜಿಯ ಅಕ್ಕಿ ಬ್ಯಾಗನ್ನು ಪಡೆಯಬಹುದಾಗಿತ್ತು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು.
ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಕೇಂದ್ರ ಸರಕಾರದ ಪ್ರಕಾರ ದಾಸ್ತಾನುಗಳು ಈಗ ಮುಗಿದಿದ್ದು, ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಇದುವರೆಗೂ 5 ಸಾವಿರ ಟನ್ ಭಾರತ್ ರೈಸ್ ಮಾರಾಟ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು