12:01 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಭಾರತ್ ರೈಸ್ ಮಾರಾಟ ತಾತ್ಕಾಲಿಕ ಸ್ಥಗಿತ: ಭಾರೀ ಬೇಡಿಕೆಯಿತ್ತು ಕೆಜಿಗೆ 29 ರೂ.ಗೆ ಸಿಗುತ್ತಿದ್ದ ಅಕ್ಕಿಗೆ

04/07/2024, 17:14

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಕೆಜಿಗೆ 29 ರೂ.ಗಳ ಈ ಅಕ್ಕಿಗೆ ಬಹಳ ಬೇಡಿಕೆ ಇತ್ತು. ಆಧಾರ್ ಕಾರ್ಡ್ ನಂಬರ್ ಹೇಳಿ 10 ಕೆಜಿಯ ಅಕ್ಕಿ ಬ್ಯಾಗನ್ನು ಪಡೆಯಬಹುದಾಗಿತ್ತು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು.
ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಕೇಂದ್ರ ಸರಕಾರದ ಪ್ರಕಾರ ದಾಸ್ತಾನುಗಳು ಈಗ ಮುಗಿದಿದ್ದು, ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಇದುವರೆಗೂ 5 ಸಾವಿರ ಟನ್ ಭಾರತ್ ರೈಸ್ ಮಾರಾಟ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು