8:14 PM Friday6 - June 2025
ಬ್ರೇಕಿಂಗ್ ನ್ಯೂಸ್
Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ… Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ…

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು