9:37 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ

13/12/2024, 21:13

ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ICAR-IIHR ಸಂಸ್ಥೆಯು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೋಟಕಾರಿಕಾ ವಲಯದಲ್ಲಿ ಅಧಿಕ ಇಳುವರಿ ನೀಡುವ ಬೆಳೆಗಳು, ಹೆಚ್ಚು ರೋಗ ನಿರೋಧಕ ಶಕ್ತಿ ಇರುವ ಬೆಳೆಗಳ ಸಂಶೋಧನೆ, ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮೂಲಕ ರೈತರ ಆರ್ಥಿಕ ಪ್ರಗತಿಗೆ ಸಹಕರಿಸುತ್ತಿದೆ.
ದೇಶದಲ್ಲಿ 2025 ರ ವೇಳೆಗೆ ಸುಮಾರು 1.5 ಲಕ್ಷ ತೋಟಗಾರಿಕಾ ಪದವಿಧರರು ಅವಶ್ಯಕತೆಯಿದ್ದು, ಪ್ರಸ್ತುತ 57 ತೋಟಗಾರಿಕಾ ಕಾಲೇಜುಗಳಲ್ಲಿ 10 ಸಾವಿರಕ್ಕೂ ಕಡಿಮೆ ಪದವಿಧರರು ಹೊರಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ರೈತರಿಗೆ, ಮಾರಾಟಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ICAR-IIHR ಅನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಹಾಗೂ ಈಗಾಗಲೇ ಸಂಸದರು ಪತ್ರದ ಮುಖೇನ ಮನವಿ ಸಲ್ಲಿಸಿದ್ದ ರಾಮನಗರ ಜಿಲ್ಲೆಯಾದ್ಯಂತ ಮಾವು ಹಾಗೂ ತೆಂಗು ಬೆಳೆ ಶೇಕಡಾ 90 ರಷ್ಟು ಹಾನಿಯಾಗಿದ್ದು 50,000ಕ್ಕೂ ಅಧಿಕ ರೈತರು ನಷ್ಟ ಅನುಭವಿಸಿದ್ದಾರೆ. ಮಾವು ಬೆಳೆಗೆ 57.67 ಕೋಟಿ ಹಾಗೂ ತೆಂಗು ಬೆಳೆಗೆ 30.65 ಕೋಟಿ ನೆರವನ್ನು NDRF ಅಡಿಯಲ್ಲಿ ಕಲ್ಪಿಸುವ ಮೂಲಕ ನಮ್ಮ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವರಿಗೆ
ಡಾ.ಸಿ ಎನ್ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು