8:06 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು, ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು: ಯು.ಟಿ.ಖಾದರ್ ಆಗ್ರಹ

21/11/2022, 21:50

ಮಂಗಳೂರು(reporterkarnataka.com): ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ.

ಮಂಗಳೂರಿನಲ್ಲಿ ಸ್ವಾತಂತ್ರ್ಯ ವೀರ ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಅನಾವರಣ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬಾವುಟ ಗುಡ್ಡೆಯಲ್ಲಿ ಮಾಡಲಾಗಿರುವ ಪ್ರತಿಮೆ ಅನಾವರಣ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರವಾಗಿದೆ.
ಭವಿಷ್ಯದಲ್ಲಿ ಇದು ವಿದ್ಯಾರ್ಥಿಗಳಿಗೆ ಇತಿಹಾಸ ತಿಳಿಸಲು ಅಗತ್ಯವಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ಜಿಲ್ಲೆಯಲ್ಲಿ ಇದ್ದಾರೆ. ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಮಹತ್ವ ನಮ್ಮವರಿಗೆ ಸಿಕ್ಕಿಲ್ಲ.

ಹಾಗಾಗಿ ಪಠ್ಯ ಪುಸ್ತಕದಲ್ಲಿ ರಾಮಯ್ಯ ಗೌಡರ ಪಠ್ಯ ಸೇರಿಸಬೇಕು, ಸರ್ಕಾರ ಆ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಬೇಕು ಎಂದು ಯು.ಟಿ.ಖಾದರ್ ಅವರು ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರದ್ದು ಜಾತಿ, ಧರ್ಮ ಮೀರಿ ನಿಂತ ವ್ಯಕ್ತಿತ್ವವಾಗಿತ್ತು.ಸ್ವಾತಂತ್ರ್ಯ ಹೋರಾಟಗಾರರ ತತ್ವ ನಮಗೆ ಮುಖ್ಯ ಆಗಬೇಕು.ಅವರೆಲ್ಲರ ಇತಿಹಾಸಗಳು ಪಠ್ಯದಲ್ಲಿ ದಾಖಲಾಗಿ ಮುಂದಿನ ಪೀಳಿಗೆಗೆ ತಿಳಿಯುವಂತಾಗಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು