6:22 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಹಳೆಯ ಕಟ್ಟಡಗಳಿಗೆ ಸೆಸ್ ಪಡೆಯಬಾರದು: ಕುಶಾಲನಗರ ಚೇಂಬರ್ ಆಫ್ ಕಾಮರ್ಸ್

19/09/2025, 22:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ವ್ಯಾಪ್ತಿಯಲ್ಲಿ 15, 20 ವರ್ಷಗಳ ಹಳೆಯ ವಾಣಿಜ್ಯ ಕಟ್ಟಡಗಳಿಗೆ ಕಾರ್ಮಿಕ ಇಲಾಖೆಯಿಂದ ನೋಟಿಸ್ ನೀಡುತ್ತಿರುವುದು ತಪ್ಪು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿಯನ್ನು ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಅಧ್ಯಕ್ಷ ಕೆ ಎಸ್ ನಾಗೇಶ್ ನೇತೃತ್ವದಲ್ಲಿ ನೀಡಲಾಯಿತು.
ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇಂಬರ್ ಪ್ರತಿನಿಧಿಗಳು, ಸ್ಥಳೀಯ ಪಂಚಾಯಿತಿ ಕಟ್ಟಡ ನಿರ್ಮಾಣ ಪರವಾನಗಿ ನೀಡುವಾಗ ಕಾರ್ಮಿಕ ಸೆಸ್ ಪಡೆದಿರುತ್ತಾರೆ. ಕಾರ್ಮಿಕ ಇಲಾಖೆ ಪಂಚಾಯಿತಿಯಿಂದ ಸಂಗ್ರಹಿಸಲಾದ ಸೆಸ್ ಹಣವನ್ನು ಪಡೆಯಬೇಕು. ಅದು ಬಿಟ್ಟು ಮಾಲೀಕರಿಗೆ ನೋಟಿಸ್ ನೀಡಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ, ಜನರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಇರಲು ಸೂಚಿಸಿದರು. ಪ್ರತಿ 45 ದಿನಗಳಿಗೆ ಒಮ್ಮೆ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಗಬೇಕಿರುವ ಕೆಲಸ ಕಾರ್ಯಗಳ ಚರ್ಚಿಸಿ ಮುನ್ನಡೆಯಲು ಸಲಹೆ ನೀಡಿದರು.
ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಅನವಶ್ಯಕವಾಗಿ ಯಾರಿಗೂ ನೋಟಿಸ್ ಕೊಡುವುದಕ್ಕಿಂತ, ಸರಿಯಾದ ರೀತಿಯಲ್ಲಿ ಪರಿಶೀಲಿಸಿ ಅಗತ್ಯವಿರುವವರಿಂದ ಟ್ಯಾಕ್ಸ್ ಸಂಗ್ರಹ ಮಾಡಿ. ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳನ್ನು ಪರಿಶೀಲಿಸಿ ಟ್ಯಾಕ್ಸ್ ಸಂಗ್ರಹ ಮಾಡಲು ಯಾರಿಂದಲೂ ವಿರೋಧವಿರುವುದಿಲ್ಲ ಎಂದು ತಿಳಿಸಿದರು.
ಸಚಿವರು ಶಾಸಕರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಸಭೆಯಲ್ಲಿ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ನ ಖಜಾಂಚಿ ಎನ್.ವಿ.ಬಾಬು, ಉಪಾಧ್ಯಕ್ಷ ರಂಗಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಅಂಬೇಕಲ್ ನವೀನ್, ಸೋಮವಾರಪೇಟೆ ಅಧ್ಯಕ್ಷ ಧನು ಕುಮಾರ್ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು