4:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಿಇಟಿ ಹೊಸ RANK ಪಟ್ಟಿ ಪ್ರಕಟಿಸಿ: ಕೆಇಎಗೆ ರಾಜ್ಯ ಹೈಕೋರ್ಟ್ ಮಹತ್ವದ ಆದೇಶ

04/09/2022, 12:46

ಬೆಂಗಳೂರು(reporterkarnataka.com):
2020-21 ನೇ ಸಾಲಿನ ದ್ವಿತೀಯ ಪಿಯುಸಿ
ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ (RANKING) ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನಿರ್ದೇಶನ ನೀಡಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌ ಈಶ್ವರ್‌ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು