9:15 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು