10:03 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು