2:46 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ: ಕಾಂಗ್ರೆಸ್ ಗೆ ಕುಡಚಿ ಶಾಸಕ ಪಿ.ರಾಜೀವ್ ತಿರುಗೇಟು

06/06/2022, 21:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಈ ನೆಲದ ವಿಚಾರಧಾರೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದೆ. ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ ಎಂದು ಕುಡಚಿ ಶಾಸಕ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸಿಗರು ಚಡ್ಡಿಗೆ ಬೆಂಕಿ ಹಾಕ್ತಿಲ್ಲ, ಜನರ ಮನಸ್ಸು, ಹೃದಯಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಅವರ ನೈತಿಕತೆ, ಚಿಂತನೆ ಏನೆಂದು ತೋರಿಸುತ್ತಿದೆ ಎಂದರು.

ಕಾಂಗ್ರೆಸ್ ಮನಸ್ಥಿತಿ ಎಷ್ಟು ವಿಕೃತ ಎಂಬುದನ್ನು ಇದು ತೋರಿಸುತ್ತೆ. ಆರ್.ಎಸ್.ಎಸ್. ದೇಶಾಭಿಮಾನ, ರಾಷ್ಟ್ರೀಯತೆ  ಭಾವನೆಯ ಹೃದಯ ಕಟ್ಟುವ ಕೆಲಸ ಮಾಡಿದೆ. ದೂರದಲ್ಲಿ ನಿಂತು ಏನೋ ಮಾತನಾಡೋದಲ್ಲ, ಹತ್ತಿರದಿಂದ ಬಂದು ನೋಡಿ ಎಂದು ಅವರು ಸಲಹೆ ನೀಡಿದರು.

1963ರಲ್ಲಿ ನೆಹರೂ ರಾಜ್ ಪಥ್ ನಲ್ಲಿ ಆರ್.ಎಸ್.ಎಸ್.ಇರಬೇಕು ಎಂದಿದ್ದರು. ಇಂಡಿಯಾ-ಪಾಕಿಸ್ತಾನ ವಿಭಜನೆಯಾದಾಗ ನಿಂತವರು ಸ್ವಯಂ ಸೇವಕರು.ಭಾರತ-ಚೀನಾ ಯುದ್ಧವಾದಾಗ ಯುದ್ಧಭೂಮಿಯಲ್ಲಿ ಸೇವೆ ಮಾಡಿದವರು ಸ್ವಯಂ ಸೇವಕರು ಎಂದವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು