4:16 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ

27/12/2025, 19:38

ಉಡುಪಿ(reporterkarnataka.com): ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು.


ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಂತೆ ತನಿಖೆ ನಡೆಸಿದ ಪೊಲೀಸರು,ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು