6:14 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ; 800 ಪುಟಗಳ ದೋಷಾರೋಪ ಪಟ್ಟಿ; 68 ಸಾಕ್ಷ್ಯ ಸಂಗ್ರಹ

09/11/2023, 19:47

ಬೆಂಗಳೂರು(reporterkarnataka.com):ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಮತ್ತು ತಂಡದ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಬುಧವಾರ ನಗರದ 3ನೇ ಎಸಿಎಂಎಂ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಸುಮಾರು 68 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿರುವ ಚಾರ್ಜ್​ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಕೊಟ್ಯಂತರ ರೂ. ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಸಿಸಿಬಿ ಘಟಕದ ಮಹಿಳಾ ಸಂರಕ್ಷಣಾ ದಳದ ಎಸಿಪಿ ನೇತೃತ್ವದಲ್ಲಿ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಚೈತ್ರಾ ಹಾಗೂ ಉಳಿದ ಆರೋಪಿಗಳು ವಂಚನೆ ಪ್ರಕರಣದಲ್ಲಿ ತಮ್ಮ ಪಾತ್ರಗಳ ಬಗ್ಗೆ ತನಿಖಾಧಿಕಾರಿ ಎದುರು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳ ತಪ್ಪೊಪ್ಪಿಗೆಯನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಉದ್ಯಮಿಯಿಂದ ಎಲ್ಲೆಲ್ಲಿ ಹಣ ಪಡೆದಿದ್ದರು. ಏನೆಲ್ಲ ಖರೀದಿಸಿದ್ದರು. ಎಲ್ಲೆಲ್ಲಿ ಹೂಡಿಕೆ ಮಾಡಿದ್ದರು ಎಂಬುದರ ಬಗ್ಗೆ ಸೂಕ್ತ ಪುರಾವೆಗಳನ್ನು ಸಲ್ಲಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು