6:52 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಚಳ್ಳಕೆರೆ: ರಾಷ್ಟಿಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ

25/01/2024, 17:26

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟಿಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸತೀಶ್ ನಾಯ್ಕ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಹನ ಚಾಲಕರು ಮತ್ತು ಪಾದಚಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳೆಸಿಕೊಳ್ಳಬೇಕು. ಶಿಸ್ತಿನ ಸಂಚಾರ, ಸುಗಮ ಸಂಚಾರಕ್ಕೆ ಹಾದಿ ಎಂಬುದನ್ನು ತಿಳಿದಿರಬೇಕು. ಇಲ್ಲವಾದಲ್ಲಿ ಅಪಾಯಕಾರಿ. ಜನಸಾಮಾನ್ಯರಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು. ರಸ್ತೆ ಅಪಘಾತ, ಸಾವು-ನೋವುಗಳ ಬಗ್ಗೆ ಅವರ ಗಮನಕ್ಕೆ ತರುವುದು ಹಾಗೂ ರಸ್ತೆ ನಿಯಮಗಳನ್ನು ಪಾಲಿಸುವಂತೆ ಪ್ರತಿಯೊಬ್ಬರಲ್ಲೂ ಶಿಸ್ತು ಮೂಡಿಸುವುದು ಇದರ ಉದ್ದೇಶ ಎಂದು ಅವರು ನುಡಿದರು.
‘ನೆಮ್ಮದಿಯ ಬಾಳಿಗೆ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ.ಇದರಲ್ಲಿ ಪ್ರಮುಖವಾಗಿ ರಸ್ತೆ ಅಪಘಾತಗಳು, ಸಾರ್ವಜನಿಕರಿಗೆ ಸಂಚಾರ ಸುರಕ್ಷತಾ ಸೂಚನೆಗಳು, ರಸ್ತೆ ಅಪಘಾತ ನಿಯಂತ್ರಣ, ರಸ್ತೆ ಸುರಕ್ಷೆ ಮತ್ತು ಜೀವನ ರಕ್ಷೆ, ಮಕ್ಕಳು ಏನು ಮಾಡಬೇಕು, ವಾಹನ ಚಾಲಕರು ಏನು ಮಾಡಬೇಕು, ಪಾದಚಾರಿಗಳು ಹೇಗೆ ಸಂಚರಿಸಬೇಕು, ಸಂಚಾರಿ ಗೆರೆಗಳು, ಸಂಚಾರದ ಸಂಕೇತಗಳು, ಸುಗಮ ಸಂಚಾರಕ್ಕೆ ಸುಲಭ ಉಪಾಯಗಳು, ಕಡ್ಡಾಯವಾಗಿ ಪಾಲಿಸಬೇಕಾದ ಚಿಹ್ನೆಗಳು, ಕಾಲು ನಡಿಗೆಯ ಸುರಕ್ಷಿತ ದಾರಿ, ಸಿಗ್ನಲ್‌ನಲ್ಲಿ ಆಗುವ ಅಪಘಾತಗಳು ಸೇರಿದಂತೆ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಾರ್ವಜನಿಕರಲ್ಲಿ ತಿಳಿಹೇಳಲಾಗುತ್ತದೆ‌. ಈ ಮೂಲಕ ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಚಾರದೆಡೆಗೆ ಮುಂದಗಬೇಕಿದೆ. ಹಾಗೆಯೇ ಎಲ್ಲರೂ ಹೀಗಿನ ವಿದ್ಯಾರ್ಥಿಗಳಿಗೆ ಹೇಳುವುದೇನೆಂದರೆ ಎಲ್ಲರೂ ಸಹ ಡ್ರೈವಿಂಗ್ ಪರವಾನಿಗೆ ಮಾಡಿಸಿಕೊಳ್ಳಿ ಎಂದು ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು.

ನಂತರ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಎಂ. ಬೇನಾಲ್ ರವರು ಮಾತನಾಡಿ, ರಸ್ತೆ ಅಪಘಾತದಲ್ಲಿ ಸಾಕಷ್ಟು ಜನರು ಅಪಘಾತಕ್ಕೆ ಇಡಗುತ್ತಿದ್ದಾರೆ. ಇಂತಹ ಜನರಿಗೆ ನಾವು ರಕ್ತವನ್ನು ದಾನಮಾಡಿ ಅವರ ಜೀವ ಉಳಿಸಿ ಎಂದರು. ಎನ್.ಎಸ್.ಎಸ್ ಶಿಬಿರದಲ್ಲಿ ನೋಂದಹಿಸಿದ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ವಿದ್ಯಾರ್ಥಿಗಳು ಮಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಹಾಸ್ಎನ್., ಜಿಲ್ಲಾ ಯುವಜನ ಅಧಿಕಾರಿ ನೆಹರು ಯುವ ಕೇಂದ್ರ ಚಿತ್ರದುರ್ಗ ಮತ್ತು ಶ್ರೀ ಮಜಹಾರ್ ಉಲ್ಲಾ ಎನ್., ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ. ತಿಮ್ಮಪ್ಪ ಬಾಲಾಜಿ ರಕ್ತ ನಿಧಿ ಕೇಂದ್ರ ಚಳ್ಳಕೆರೆ. ಮತ್ತು ಡಾ. ಲಕ್ಷ್ಮಿ ದೇವಮ್ಮ ಯುವ ರೆಡ್ ಕ್ರಾಸ್ ಸಂಯೋಜಕರು ಇಂಜಿನಿಯರ್ ಕಾಲೇಜು ಚಳ್ಳಕೆರೆ. ಹಾಗೆಯೇ ಮಲ್ಲಿಕಾರ್ಜುನ ಎ. ಐ. &ಎಂ. ಎಲ್ ಸಹಾಯಕ ಪ್ರಧ್ಯಾಪಕರು. ನಾಗಾರ್ಜುನ ಎಸ್ ದೈಹಿಕ ನಿರ್ದೇಶಕರು. ಇಂಜಿನಿಯರ್ ಕಾಲೇಜು ಚಳ್ಳಕೆರೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು