10:14 PM Thursday8 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ…

ಇತ್ತೀಚಿನ ಸುದ್ದಿ

ಚಲನಚಿತ್ರೋದ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ

02/01/2025, 12:00

ಮಂಗಳೂರು(reporterkarnataka.com):ʻಇಡೀ ವಿಶ್ವಾದ್ಯಂತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು 100 ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು, ಧನಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವ ಕಲಾತ್ಮಕ ಚಿತ್ರವಾಗಿ ಮೂಡಿ ಬಂದಿದೆ. ಅದಕ್ಕಾಗಿ ನಾವು ʻಸಂಗೀತ್ ಘರ್ ಪ್ರೊಡಕ್ಷನ್ಸ್ʼ ಜೋಡಿ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ಅವರನ್ನು ಖಂಡಿತವಾಗಿಯೂ ಅಭಿನಂದಿಸಬೇಕುʼಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿʼಸೋಜ ಹೇಳಿದರು.


ಅವರು ನಗರದ ಬಿಜೈನಲ್ಲಿರುವ ಭಾರತ್ ಸಿನೇಮಾದಲ್ಲಿ ʻಪಯಣ್ʼ ಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಸಂತ ಅಲೋಶಿಯಸ್ ವಿದ್ಯಾ ಸಂಸ್ಥೆಗಳ ರೆಕ್ಟರ್ ವಂ| ಫಾ| ಮೆಲ್ವಿನ್ ಜೋಸೆಫ್ ಪಿಂಟೊ, ಅನಿವಾಸಿ ಉಧ್ಯಮಿ ಜೇಮ್ಸ್ ಮೆಂಡೊನ್ಸಾ ಮತ್ತು ದಾಖಲೆ ನಿರ್ಮಿಸಿದ ʻಅಸ್ಮಿತಾಯ್ʼ ಕೊಂಕಣಿ ಚಿತ್ರ ನಿರ್ಮಾಪಕ, ʻಮಾಂಡ್ ಸೊಭಾಣ್ʼ ಸಂಸ್ಥೆಯ ಅಧ್ಯಕ್ಷರಾದ ಲುವಿ ಪಿಂಟೊ ಗೌರವ ಅಥಿತಿಳಾಗಿ ಹಾಜರಿದ್ದರು. ಪಯಣ್ ಸಿನಿಮಾ ನಿರ್ದೇಶಕ ʻಸಂಗೀತ್ ಗುರುʼ ಜೊಯೆಲ್ ಪಿರೇರಾ ವೇದಿಕೆಯಲ್ಲಿ ಹಾಜರಿದ್ದರು.
ಕೊಂಕಣಿಯ ಖ್ಯಾತ ಗಾಯಕ, ಪಯಣ್ ಚಲನಚಿತ್ರದ ನಿರ್ಮಾಪಕ ಮೆಲ್ವಿನ್ ಪೆರಿಸ್ರವರು ಚಲನಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲಾ ಕಲಾವಿದರಿಗೆ, ತಂತ್ರಜ್ಞರಿಗೆ ಹಾಗೂ ವೀಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಸಿನಿಮಾ ನಟ, ಸಂಯೋಜಕ, ಸಂಘಟಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ʻಆಂಜೆಲೊರ್ ಕೊಯರ್ʼ ಪಂಗಡದವರು ಕ್ರಿಸ್ಮಸ್ ಹಾಡೊಂದನ್ನು ಹಾಡಿ ಟಾಕಿಸಿನಲ್ಲಿ ಕ್ರಿಸ್ಮಸ್ ಕಳೆ ತಂದರು. ಕಾರ್ಯಕ್ರಮದ ಕೊನೆಯಲ್ಲಿ ತುಂಬಿದ ಚಿತ್ರಮಂದಿರದಲ್ಲಿ ʻಪಯಣ್ʼ ಸಿನಿಮಾದ ಕೊನೆಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು