5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಚಲನಚಿತ್ರೋದ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ

02/01/2025, 12:00

ಮಂಗಳೂರು(reporterkarnataka.com):ʻಇಡೀ ವಿಶ್ವಾದ್ಯಂತ ಚಲನ ಚಿತ್ರೋದ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು 100 ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು, ಧನಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವ ಕಲಾತ್ಮಕ ಚಿತ್ರವಾಗಿ ಮೂಡಿ ಬಂದಿದೆ. ಅದಕ್ಕಾಗಿ ನಾವು ʻಸಂಗೀತ್ ಘರ್ ಪ್ರೊಡಕ್ಷನ್ಸ್ʼ ಜೋಡಿ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ಅವರನ್ನು ಖಂಡಿತವಾಗಿಯೂ ಅಭಿನಂದಿಸಬೇಕುʼಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿʼಸೋಜ ಹೇಳಿದರು.


ಅವರು ನಗರದ ಬಿಜೈನಲ್ಲಿರುವ ಭಾರತ್ ಸಿನೇಮಾದಲ್ಲಿ ʻಪಯಣ್ʼ ಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆಯಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಸಂತ ಅಲೋಶಿಯಸ್ ವಿದ್ಯಾ ಸಂಸ್ಥೆಗಳ ರೆಕ್ಟರ್ ವಂ| ಫಾ| ಮೆಲ್ವಿನ್ ಜೋಸೆಫ್ ಪಿಂಟೊ, ಅನಿವಾಸಿ ಉಧ್ಯಮಿ ಜೇಮ್ಸ್ ಮೆಂಡೊನ್ಸಾ ಮತ್ತು ದಾಖಲೆ ನಿರ್ಮಿಸಿದ ʻಅಸ್ಮಿತಾಯ್ʼ ಕೊಂಕಣಿ ಚಿತ್ರ ನಿರ್ಮಾಪಕ, ʻಮಾಂಡ್ ಸೊಭಾಣ್ʼ ಸಂಸ್ಥೆಯ ಅಧ್ಯಕ್ಷರಾದ ಲುವಿ ಪಿಂಟೊ ಗೌರವ ಅಥಿತಿಳಾಗಿ ಹಾಜರಿದ್ದರು. ಪಯಣ್ ಸಿನಿಮಾ ನಿರ್ದೇಶಕ ʻಸಂಗೀತ್ ಗುರುʼ ಜೊಯೆಲ್ ಪಿರೇರಾ ವೇದಿಕೆಯಲ್ಲಿ ಹಾಜರಿದ್ದರು.
ಕೊಂಕಣಿಯ ಖ್ಯಾತ ಗಾಯಕ, ಪಯಣ್ ಚಲನಚಿತ್ರದ ನಿರ್ಮಾಪಕ ಮೆಲ್ವಿನ್ ಪೆರಿಸ್ರವರು ಚಲನಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲಾ ಕಲಾವಿದರಿಗೆ, ತಂತ್ರಜ್ಞರಿಗೆ ಹಾಗೂ ವೀಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಸಿನಿಮಾ ನಟ, ಸಂಯೋಜಕ, ಸಂಘಟಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಆರಂಭದಲ್ಲಿ ʻಆಂಜೆಲೊರ್ ಕೊಯರ್ʼ ಪಂಗಡದವರು ಕ್ರಿಸ್ಮಸ್ ಹಾಡೊಂದನ್ನು ಹಾಡಿ ಟಾಕಿಸಿನಲ್ಲಿ ಕ್ರಿಸ್ಮಸ್ ಕಳೆ ತಂದರು. ಕಾರ್ಯಕ್ರಮದ ಕೊನೆಯಲ್ಲಿ ತುಂಬಿದ ಚಿತ್ರಮಂದಿರದಲ್ಲಿ ʻಪಯಣ್ʼ ಸಿನಿಮಾದ ಕೊನೆಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು