1:12 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ದಾರುಣ ಸಾವು: ಮಾವನ ಜತೆ ಹೊಲಕ್ಕೆ ಹೋಗಿದ್ದ 8ರ ಹರೆಯದ ಪೋರ

18/05/2024, 11:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂಟು ವರ್ಷದ ಭವಿಷ್ ಎಂಬ ಬಾಲಕನೇ ಟ್ರ್ಯಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಸಾವನ್ನಪ್ಪಿರುವ ನತದೃಷ್ಟ ಬಾಲಕ. ಶಾಲೆ ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಾಲಕ ಬಂದಿದ್ದ. ಬಾಲಕನ ತಾಯಿ ಮಮತಾ ದೇವರಸ ಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದರು.
ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತಾಯಿ ಮನೆ ದೇವರಸನಹಳ್ಳಿಗೆ ಬಂದಿದ್ದರು.
ಮೃತ ಬಾಲಕನ ಸೋದರ ಮಾವ ತನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಹಾಗೂ ಆತನ ಸಹೋದರಿಯನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಲಾಗಿದೆ.
ಟ್ರಾಕ್ಟರ್ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ರೋಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಬಾಲಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಬಾಲಕನ ಮೃತ ದೇಹ ಕಂಡ ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು