2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಚಲಿಸುತ್ತಿದ್ದ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ದಾರುಣ ಸಾವು: ಮಾವನ ಜತೆ ಹೊಲಕ್ಕೆ ಹೋಗಿದ್ದ 8ರ ಹರೆಯದ ಪೋರ

18/05/2024, 11:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಂಟು ವರ್ಷದ ಭವಿಷ್ ಎಂಬ ಬಾಲಕನೇ ಟ್ರ್ಯಾಕ್ಟರ್ ನಿಂದ ಬಿದ್ದು ರೋಟರಿಗೆ ಸಿಲುಕಿ ಸಾವನ್ನಪ್ಪಿರುವ ನತದೃಷ್ಟ ಬಾಲಕ. ಶಾಲೆ ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಾಲಕ ಬಂದಿದ್ದ. ಬಾಲಕನ ತಾಯಿ ಮಮತಾ ದೇವರಸ ಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದರು.
ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತಾಯಿ ಮನೆ ದೇವರಸನಹಳ್ಳಿಗೆ ಬಂದಿದ್ದರು.
ಮೃತ ಬಾಲಕನ ಸೋದರ ಮಾವ ತನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಹಾಗೂ ಆತನ ಸಹೋದರಿಯನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಲಾಗಿದೆ.
ಟ್ರಾಕ್ಟರ್ ಉಳುಮೆ ಮಾಡುವ ಸಂದರ್ಭ ಬಾಲಕ ಭವಿಷ್ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ರೋಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಬಾಲಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಬಾಲಕನ ಮೃತ ದೇಹ ಕಂಡ ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು