10:16 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಅಕ್ರಮ ಮಣ್ಣು ಸಾಗಾಟ; ಗೋಪಾನಹಳ್ಳಿ ಹಳ್ಳಕ್ಕೆ ದಿಕ್ಕು ಬದಲಾಯಿಸುವ ಭೀತಿ 

13/02/2022, 09:43

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ಹಳ್ಳದ ತಟದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಸಾಗಾಟದಿಂದ ಹಳ್ಳ ಹರಿಯುವ ದಿಕ್ಕು ಬದಲಾವಣೆಯಾಗುವ ಭೀತಿ ಎದುರಾಗಿದೆ.


ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಸಮೀಪದ ರಾಷ್ಟ್ರೀಹ ಹೆದ್ದಾರಿಗೆ ಹೊಂದಿಕೊಂಡ ಗರಣಿ(ಗೋಪನಹಳ್ಳಿ)  ಹಳ್ಳದಲ್ಲಿನ ದಡದ ಮಣ್ಣನ್ನು ಸಮೀಪದ ಜಮೀನಿಗೆ ಸಾಗಾಟ ಮಾಡಿದ್ದು ಮಳೆಗಾದಲ್ಲಿ ಹಳ್ಳದ ನೀರು ಪಕ್ಕದ ಜಮೀನುಗಳು ಜಲಾವೃತಗೊಳ್ಳುವ ಭೀತಿ ರೈತರಲ್ಲಿ ಆತಂಕ ಮಾಡಿದೆ.


ಹಳ್ಳದ ಎರಡು ಬದಿಯಲ್ಲಿ ಏರಿ ನಿರ್ಮಿಸಿದ್ದು ಎರಡು ಏರಿಯ ಮಣ್ಣು ಅಕ್ರಮವಾಗಿ ಪಕ್ಕದ ಜಮೀನಿಗೆ ಸಾಕಾಟ ಮಾಡಿದ್ದು ಹೆದ್ದಾರಿ ರಸ್ತೆಯ ಅಭಿವೃದ್ಧಿಗೂ ಸಹ ಹಳ್ಳದ ಏರಿಯ ದಡದ ಮಣ್ಣನ್ನು ಬಳಸಿಕೊಂಡು ಸುತ್ತಮುತ್ತಲಿನ ಫಲವತ್ತಾದ ಮಣ್ಣನ್ನು ಬಗೆದು ಟಿಪ್ಪರ್‍ಗಳ ಮೂಲಕ ಸಾಗಾಟ ಮಾಡಲಾಗಿದ್ದು ಹಳ್ಳದ ಚಿತ್ರಣವನ್ನೇ ಬದಲಾಯಿಸಿದ್ದಾರೆ.

by
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಹಳ್ಳದಲ್ಲಿ ಅಕ್ರಮವಾಗಿ ಹಗಲು ರಾತ್ರಿ ಜೆಸಿಬಿ ಹಾಗೂ ಬೃಹತ್ ಟಿಪ್ಪರ್ ವಾಹನಗಳ ಮೂಲಕ  ಮಣ್ಣು ತೆಗೆದಿರುವ ಸ್ಥಳಗಳಲ್ಲಿ ಹತ್ತಾರು ಅಡಿಗಳಷ್ಟು ಆಳದ ಗುಂಡಿಗಳು ಸೃಷ್ಟಿಯಾಗಿದ್ದು,  ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡಲು ಸಂಬಂಧಿಸಿದ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶನ ಮಾಡಲಾಗಿದೆ ಎಂದು ಸಾರ್ವಜನಿಕ ಆರೋಪಿಸಿದ್ದಾರೆ.ಎಲ್ಲಿಂದ ಎಲ್ಲಿಗೆ ಹರಿತ್ತದೆ.


ಚಿತ್ರದುರ್ಗ ತಾಲ್ಲೂಕಿನ ಗೋನೂರು ಕೆರೆ ಕೋಡಿ ಬಿದ್ದು ದ್ಯಾಮವ್ವನಹಳ್ಳಿ ಕೆರೆಗೆ ಸೇರಿ ಕೋಡಿ ಬಿದ್ದ ನಂತರ ಬೊಮ್ಮೇನಹಳ್ಳಿ, ಹಂಪಯ್ಯನ ಮಾಳಿಗೆ ಗೊಲ್ಲರಹಟ್ಟಿ ಮೂಲಕ ದ್ಯಾಮವ್ವನಹಳ್ಳಿ ಕೆರೆ, ಕಲ್ಲಳ್ಳಿ, ಚಿಕ್ಕಮಧುರೆ ಕೆರೆಗಳು ತುಂಬಿ ಗಂಜಿಕುಂಟೆ, ಸಾಣೀಕೆರೆ, ಕೆರೆಗಳು ಕೋಡಿ ಬಿದ್ದ ನೀರು ಕಮ್ಮತ್ ಮರಿಕುಂಟೆ , ಗೋಪನಹಳ್ಳಿ ಮಾರ್ಗವಾಗಿ ಗರಣಿ ಸೇತುವೆ ಬಳಿಗೆ ದೊಡ್ಡೇರಿ ಕೆರೆ ಹಾಗೂ ರಾಣಿಕೆರೆಗೆ ಎರಡು ಕೆರೆಗಳಿಗೆ ನೀರು ಹರಿಯುವ ಬೃಹತ್ ಹಳ್ಳವಾಗಿದ್ದು ಹಳ್ಳದ ಎರಡು ದಡವನ್ನು ಅಕ್ರಮ ಮಣ್ಣು ದಂದೆಕೋರರಿಗೆ ಸಿಲುಕಿ ಹಳ್ಳ ನಲುಗಿ ಹೋಗಿದ್ದು ಮಳೆ ಬಂದಾಗ ಹಳ್ಳ ತುಂಬಿ ಹರಿದರೆ ಅಕ್ಕ ಪಕ್ಕದ ರೈತರ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುವ ಬೀತಿ ಎದುರಾಗಿದ್ದು  ಅಕ್ರಮ ಮಣ್ಣು ಸಾಗಾಟದ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆಯವರು ಕಂದಾಯ ಇಲಾಖೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ  ಆದರೆ ಅಪ್ಪ ಅಮ್ಮನ ಜಗಳದ ನಡುವೆ ಕೂಸು ಬಡವಾಯಿತು ಎಂಬ ಗಾದೆ ಮಾತಿನಂತೆ ಅಧಿಕಾರಿಗಳ ನಿರ್ಲಕ್ಷೆ ಸಿಲುಕಿ ಹಳ್ಳದ ಏರಿಗಳು ಮಾಯವಾಗುತ್ತಿರುವುದು ಸತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು