3:46 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು

21/12/2023, 20:59

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಕಿರಣ್ ಗೌಡ ಎಂಬ ರೈತ ತನ್ನ ಮೂರೂವರೆ ಎಕರೆ ಜಮೀನಿನಲ್ಲಿ ಕರ್ಬುಜ ಹಣ್ಣನ್ನು ಬೆಳೆದಿದ್ದಾರೆ. ಆದರೆ ಫಸಲು ಕೈ ಸೇರಬೇಕು ಅನ್ನುವಷ್ಟರಲ್ಲಿ, ಕರ್ಬುಜ ಹಣ್ಣುಗಳು ಹೊಸ ಬಗೆಯ ರೋಗಕ್ಕೆ ತುತ್ತಾಗಿ ಹಣ್ಣುಗಳು ಡ್ಯಾಮೇಜ್ ಆಗಿ ಹೋಗುತ್ತಿದ್ದು. ಇದರಿಂದ ಒಂದು ಹಣ್ಣನ್ನು ಸಹ ಮಾರಾಟ ಮಾಡದೆ ಕರ್ಬುಜ ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.
ಅನಂತಪುರದ ಶ್ರಾವಣಿ ಅಂಗಡಿಯಲ್ಲಿ, ಪಟಜಮ್ ತಳಿಯ ನಿರ್ಮಲಾ 24-24 ಬೀಜವನ್ನು ತಂದು ಬಿತ್ತನೆ ಮಾಡಿದ್ದಾರೆ. ಬೆಳೆಯು ಸಹ ಉತ್ತಮ ರೀತಿಯಲ್ಲಿ ಬಂದಿದ್ದು, ಫಸಲಿಗೆ ಬಂದಂತಹ ಸಮಯದಲ್ಲಿ ಹಣ್ಣುಗಳು ಸಂಪೂರ್ಣವಾಗಿ ಹೊಸ ರೀತಿಯ ರೋಗಕ್ಕೆ ತುತ್ತಾಗುತ್ತಿದ್ದು. ಇದರಿಂದ ರೈತನ ಕೈ ಸೇರಬೇಕಿದ್ದ 25 ರಿಂದ 30 ಟನ್ ಹಣ್ಣು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೆ ಆಗಿದೆ.
ಬರಗಾಲದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿ ಕರ್ಬುಜ ಹಣ್ಣನ್ನು ಬೆಳೆಯಲು ಮುಂದಾಗಿದ್ದೇನೆ. ಆದರೆ ಫಸಲಿಗೆ ಬಂದ ಹಣ್ಣುಗಳು ಸಂಪೂರ್ಣವಾಗಿ ರೋಗಕ್ಕೆ ತುತ್ತಾಗಿ ಆಗಿ ಹೋಗುತ್ತಿವೆ. ಇದರಿಂದ ಅಂಗಡಿಯಿಂದ ತಂದ ಬೀಜದ ಫಾಲ್ಟ್ ಅಥವಾ ಹೊಸ ತಳಿಯ ರೋಗ ಬಂದಿದೆಯಾ ಎಂಬುದು ತಿಳಿಯುತ್ತಿಲ್ಲ. ಬೆಳೆಯು ಸಂಪೂರ್ಣವಾಗಿ ನಷ್ಟವಾಗಿದ್ದು, ಇದರಿಂದ ಬೆಳೆಯನ್ನು ನಾಶಪಡಿಸಲು ಮುಂದಾಗಿದ್ದೇನೆ ಎಂದು ರೈತ ಕಿರಣ್ ಗೌಡ ಹೇಳುತ್ತಾರೆ.
ಇದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೈತರ ಜಮೀನಿಗೆ ಬಂದು ಸಂಶೋಧನೆ ನಡೆಸಿ ರೈತರ ಕೈ ಸೇರಬೇಕಿದ್ದ ಬೆಳೆಗೆ ಏನು ತೊಂದರೆ ಆಗಿದೆ ಎಂಬುದನ್ನು ತಿಳಿಸಿ.ಇಲಾಖೆ ವತಿಯಿಂದ ಪರಿಹಾರ ಕೊಡಬೇಕು ಎಂದು ಯುವ ರೈತ ಕಿರಣ್ ಗೌಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು