6:32 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು

21/12/2023, 20:59

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ.

ಕಿರಣ್ ಗೌಡ ಎಂಬ ರೈತ ತನ್ನ ಮೂರೂವರೆ ಎಕರೆ ಜಮೀನಿನಲ್ಲಿ ಕರ್ಬುಜ ಹಣ್ಣನ್ನು ಬೆಳೆದಿದ್ದಾರೆ. ಆದರೆ ಫಸಲು ಕೈ ಸೇರಬೇಕು ಅನ್ನುವಷ್ಟರಲ್ಲಿ, ಕರ್ಬುಜ ಹಣ್ಣುಗಳು ಹೊಸ ಬಗೆಯ ರೋಗಕ್ಕೆ ತುತ್ತಾಗಿ ಹಣ್ಣುಗಳು ಡ್ಯಾಮೇಜ್ ಆಗಿ ಹೋಗುತ್ತಿದ್ದು. ಇದರಿಂದ ಒಂದು ಹಣ್ಣನ್ನು ಸಹ ಮಾರಾಟ ಮಾಡದೆ ಕರ್ಬುಜ ಬೆಳೆಯನ್ನು ನಾಶಪಡಿಸಲು ರೈತ ಮುಂದಾಗಿದ್ದಾರೆ.
ಅನಂತಪುರದ ಶ್ರಾವಣಿ ಅಂಗಡಿಯಲ್ಲಿ, ಪಟಜಮ್ ತಳಿಯ ನಿರ್ಮಲಾ 24-24 ಬೀಜವನ್ನು ತಂದು ಬಿತ್ತನೆ ಮಾಡಿದ್ದಾರೆ. ಬೆಳೆಯು ಸಹ ಉತ್ತಮ ರೀತಿಯಲ್ಲಿ ಬಂದಿದ್ದು, ಫಸಲಿಗೆ ಬಂದಂತಹ ಸಮಯದಲ್ಲಿ ಹಣ್ಣುಗಳು ಸಂಪೂರ್ಣವಾಗಿ ಹೊಸ ರೀತಿಯ ರೋಗಕ್ಕೆ ತುತ್ತಾಗುತ್ತಿದ್ದು. ಇದರಿಂದ ರೈತನ ಕೈ ಸೇರಬೇಕಿದ್ದ 25 ರಿಂದ 30 ಟನ್ ಹಣ್ಣು ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೆ ಆಗಿದೆ.
ಬರಗಾಲದಲ್ಲಿ ಎರಡು ಲಕ್ಷಕ್ಕೂ ಅಧಿಕ ಸಾಲವನ್ನು ಮಾಡಿ ಕರ್ಬುಜ ಹಣ್ಣನ್ನು ಬೆಳೆಯಲು ಮುಂದಾಗಿದ್ದೇನೆ. ಆದರೆ ಫಸಲಿಗೆ ಬಂದ ಹಣ್ಣುಗಳು ಸಂಪೂರ್ಣವಾಗಿ ರೋಗಕ್ಕೆ ತುತ್ತಾಗಿ ಆಗಿ ಹೋಗುತ್ತಿವೆ. ಇದರಿಂದ ಅಂಗಡಿಯಿಂದ ತಂದ ಬೀಜದ ಫಾಲ್ಟ್ ಅಥವಾ ಹೊಸ ತಳಿಯ ರೋಗ ಬಂದಿದೆಯಾ ಎಂಬುದು ತಿಳಿಯುತ್ತಿಲ್ಲ. ಬೆಳೆಯು ಸಂಪೂರ್ಣವಾಗಿ ನಷ್ಟವಾಗಿದ್ದು, ಇದರಿಂದ ಬೆಳೆಯನ್ನು ನಾಶಪಡಿಸಲು ಮುಂದಾಗಿದ್ದೇನೆ ಎಂದು ರೈತ ಕಿರಣ್ ಗೌಡ ಹೇಳುತ್ತಾರೆ.
ಇದರಿಂದ ಸಂಬಂಧ ಪಟ್ಟ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ರೈತರ ಜಮೀನಿಗೆ ಬಂದು ಸಂಶೋಧನೆ ನಡೆಸಿ ರೈತರ ಕೈ ಸೇರಬೇಕಿದ್ದ ಬೆಳೆಗೆ ಏನು ತೊಂದರೆ ಆಗಿದೆ ಎಂಬುದನ್ನು ತಿಳಿಸಿ.ಇಲಾಖೆ ವತಿಯಿಂದ ಪರಿಹಾರ ಕೊಡಬೇಕು ಎಂದು ಯುವ ರೈತ ಕಿರಣ್ ಗೌಡ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು