3:48 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ

21/11/2021, 10:49

ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ    ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ಜಿಟಿ ಮಳೆಯಲ್ಲೂ ಕೊಡೆ ಹಿಡಿದು ಆರಂಭಿಸಿದ್ದಾರೆ. 

ಚಳ್ಳಕೆರೆ ತಾಲೂಕಿನ ಬಾಲೆನಹಳ್ಳಿ, ರಾಮಜೋಗಿಹಳ್ಳಿ, ಚಿಕ್ಕಮ್ಮನಹಳ್ಳಿ, ದೊಡ್ಡೇರಿ ಕೆರೆ ಮುದ್ದಿನ ಹಟ್ಟಿ, ಕೋಡಿಹಳ್ಳಿ, ಹಿರೇಹಳ್ಳಿ , ಪಾಲನಾಯಕನ ಕೋಟೆ, ಕಕ್ಕಿ ಬೋರನ ಹಟ್ಟಿ ಹಳ್ಳಿಗಳು ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಶೀಲ್ದಾರ್ ಎನ್.ರಘುಮೂರ್ತಿ,ತಾಪಂ ಇಒ ಮಡಗಿನ ಬಸಪ್ಪ ಹಾಗೂ ಸಿಬ್ಬಂದಿಗಳು ಪರಿಶೀಲನೆ ಆರಂಭಿಸಿದ್ದಾರೆ.


ಗೋಡೆ ಕುಸಿದು ಐದು ಜನರು ಮೃತ ಪಟ್ಟ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಹಳೆಯ ಶಿಥಿಲವಾದ ಗೋಡೆ ಬಿರುಕು ಬಿಟ್ಟಿರುವ ಮನೆಗಳ ಸರ್ವೆ ಮಾಡಿ ಅಂತಹ ಕುಟುಂಬಗಳಿಗೆ ತಾತ್ಕಾಲಿಕವಾಗಿ ಶಾಲೆ ಹಾಗೂ ಸಮುದಾಯಭವನಗಳಲ್ಲಿ ತಾತ್ಕಾಲಿಕವಾಗಿ ಗಂಜಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಾಪಂ ಇಒ ಮಡಗಿನ ಬಸಪ್ಪ ತಿಳಿಸಿದ್ದಾರೆ.

ಗ್ರಾಪಂ, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಜಿಟಿ ಜಿಟಿ ಯಲ್ಲೂ ಬೆಳ್ಳೆಂ ಬೆಳ್ಳಗ್ಗೆ ಕೊಡೆಗಳನ್ನಿಡಿದು ಸರ್ವೆ ಕಾರ್ಯಕ್ಕೆ ಚುರುಕುಮಟ್ಟಿಸಿದ್ದಾರೆ.


ತಹಶೀಲ್ದಾರ್ ಎನ್.ರಘುಮೂರ್ತಿ ಮಾತನಾಡಿ ತಾಲೂಕಿನಲ್ಲಿ ಅಕಾಲಿಕ ಮೆಳೆ ಪ್ರಾರಂಭವಾಗಿ 15 ದಿನಗಳನ್ನು ಸುಮಾರು 100 ಕ್ಕೂಹೆಚ್ಚು ಮನೆಗಳು ಕುಸಿದಿದ್ದು ಪ್ರತಿ ಗ್ರಾಮಗಳಲ್ಲಿ ಹಳೆಯ ಶಿಥಿಲವಾದ ಮನೆಗಳಲ್ಲಿ ವಾಸಿಸುವ ಕುಟುಂಬಗಳು ಸುಮುದಾಯ ಭವನ, ಶಾಲೆಗಳಲ್ಲಿ ವಾಸ ಮಾಡುವಂತೆ ತಿಳಿಸಿದ್ದು ಸರಕಾರದಿಂದ ವಸತಿಯೋಜನೆಯಡಿಯಲ್ಲಿ ಬಿದ್ದ ಹಾಗೂ ಶಿಥಿಲವಾದ ಮನೆಗಳಿಗೆ ವಸತಿ ಯೋಜನೆಯ ಮನೆಗಳ ಮಂಜೂರಾತಿ ಮಾಡುವಂತೆ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು